ಮುಂಬೈ:- ಮಹರಾಷ್ಟ್ರದ ಡಿಸಿಎಂ ಏಕನಾಥ್ ಶಿಂಧೆಗೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಮುಂಬೈ ಪೊಲೀಸರಿಂದ ತನಿಖೆ ಶುರುವಾಗಿದೆ.
Muda Scam: ಪಾರ್ವತಿ ಸಿದ್ದರಾಮಯ್ಯ ಇಡಿ ತನಿಖೆಗೆ ನೀಡಿದ್ದ ತಡೆಯಾಜ್ಞೆ ವಿಸ್ತರಿಸಿದ ಹೈಕೋರ್ಟ್!
ಗೋರೆಗಾಂವ್, ಜೆ.ಜೆ ಮಾರ್ಗ್ ಪೊಲೀಸ್ ಠಾಣೆ ಮತ್ತು ರಾಜ್ಯ ಸರ್ಕಾರದ ಪ್ರಧಾನ ಕಚೇರಿಯಾದ ಮಂತ್ರಾಲಯದ ನಿಯಂತ್ರಣ ಕೊಠಡಿಗೆ ಬೆದರಿಕೆ ಸಂದೇಶಗಳು ಬಂದಿವೆ. ಈ ಬೆನ್ನಲ್ಲೇ ಪ್ರಕರಣ ದಾಖಲಿಸಿಕೊಂಡಿರುವ ಮುಂಬೈ ಪೊಲೀಸರು ಇಮೇಲ್ ವಿಳಾಸ ಪತ್ತೆ ಹೆಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.
ಶಿಂಧೆ ಅವರ ಕಾರನ್ನು ಸ್ಫೋಟಿಸುವುದಾಗಿ ಅಪರಿಚಿತ ವ್ಯಕ್ತಿ ಬೆದರಿಕೆ ಹಾಕಿದ್ದಾನೆ. ಈ ಹಿನ್ನೆಲೆ ಏಕನಾಥ್ ಶಿಂಧೆ ಅವರ ನಿವಾಸದಲ್ಲಿ ಬಿಗಿ ಭದ್ರತೆ ನಿಯೋಜಿಸಲಾಗಿದೆ. ಅಲ್ಲದೇ ಸಾರ್ವಜನಿಕರು ಎಚ್ಚರಿಕೆಯಿಂದಿರುವಂತೆ ಪೊಲೀಸರು ಸೂಚಿಸಿದ್ದಾರೆ ಎಂದು ತಿಳಿದು ಬಂದಿದೆ.