ಗದಗ:- ಲೋಕಸಭಾ ಚುನಾವಣೆ ಹಿನ್ನೆಲೆ ಹಾವೇರಿ-ಗದಗ ಬಿಜೆಪಿ ಅಬ್ಯರ್ಥಿ ಬಸವರಾಜ್ ಬೊಮ್ಮಾಯಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.
ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಭರ್ಜರಿ ಪ್ರಚಾರ ಕೈಗೊಂಡಿದ್ದು, ಈ ವೇಳೆ ಬೊಮ್ಮಾಯಿಗೆ ಕಂಬಳಿ ಹೊದಿಸಿ ಅಭಿಮಾನಿಗಳು ಕುರಿಮರಿ ನೀಡಿದ್ದಾರೆ.
ಯುಗಾದಿ ಸಂಭ್ರಮ: ಶ್ರೀ ಶಂಕರಲಿಂಗ ದೇವಸ್ಥಾನಕ್ಕೆ ಹರಿದು ಬರುತ್ತಿರುವ ಭಕ್ತಸಾಗರ!
ಕಂಬಳಿ ಹಾಕಿಕೊಂಡು ಕುರಿಮರಿ ಕೈಯಲ್ಲಿ ಬೊಮ್ಮಾಯಿ ಹಿಡಿದೆತ್ತಿಕೊಂಡಿದ್ದಾರೆ. ಬಳಿಕ ಗ್ರಾಮದಲ್ಲಿ ರೋಡ್ ಶೋ ಮಾಡಿದ ಬೊಮ್ಮಾಯಿ, ಮತದಾರರಲ್ಲಿ ಮತಯಾಚನೆ ಮಾಡಿದ್ದಾರೆ.
ನನ್ನನ್ನು ಗೆಲ್ಲಿಸೋ ಮೂಲಕ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಿ ಎಂದು ಬೊಮ್ಮಾಯಿ ಹೇಳಿದ್ದಾರೆ.
ಬೊಮ್ಮಾಯಿಗೆ ಮುಖಂಡರು, ಕಾರ್ಯಕರ್ತರು ಸಾಥ್ ಕೊಟ್ಟಿದ್ದಾರೆ.