ಗದಗ: ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣಕ್ಕೆ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಮನೆಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ನೀಡಿದ್ದಾರೆ. ಗದಗ ನಗರದ ದಾಸರ ಓಣಿಯಲ್ಲಿರೋ ಮನೆಗೆ ವಿಸಿಟ್ ಕೊಟ್ಟು ಪ್ರಕಾಶ್ ಬಾಕಳೆ ಕುಟುಂಬಕ್ಕೆ ಧೈರ್ಯ ಹೇಳಿದ್ದಾರೆ.
ಪ್ರಕಾಶ ಬಾಕಳೆ ಸುನಂದಾ ಬಾಕಳೆ ಪತಿ ಹಾಗೂ ನಗರಸಭೆ ಮಾಜಿ ಉಪಾಧ್ಯಕ್ಷರಾಗಿದ್ದು, ಕೊಲೆಗಾರರಿಗೆ ಗಲ್ಲು ಶಿಕ್ಷೆ ಕೊಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಇದೊಂದು ದುರ್ಧೈವದ ಸಂಗತಿ, ಅಮಾನುಷ ಘಟನೆ ಆದ್ದರಿಂದ ಕೊಲೆಗಡುಕರ ಪತ್ತೆಗೆ ಅಗತ್ಯ ಕ್ರಮ ತೆಗೆದುಕೊಳ್ಳುವುದಾಗಿ ಮಾಜಿ ಸಿಎಂ ಭರವಸೆ ನೀಡಿದರು.