ಲಕ್ನೋ:- ಹೃದಯಾಘಾತದಿಂದ ಬಿಜೆಪಿ ಟಿಕೆಟ್ ವಂಚಿತ ಹಾಗೂ ಹಾಲಿ ಸಂಸದ ರಾಜವೀರ್ ದಿಲೇರ್ ನಿಧನರಾದರು.
ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಹಿಂದೂ ಸಂಘಟನೆ ಕಾರ್ಯಕರ್ತ ಗಡಿಪಾರು !
ಸಂಸದರು ಅಲಿಘರ್ನಲ್ಲಿರುವ ತಮ್ಮ ನಿವಾಸದಲ್ಲಿದ್ದ ಸಂದರ್ಭದಲ್ಲಿ ಇದ್ದಕ್ಕಿದ್ದಂತೆ ಮೂರ್ಛೆ ಹೋಹಿ ಕುಸಿದು ಬಿದ್ದಿದ್ದಾರೆ. ತಕ್ಷಣ ಸಂಬಂಧಿಕರು ಅವರನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದರು. ಆದರೆ ಅಲ್ಲಿ ಅವರು ಮೃತಪಟ್ಟಿದ್ದಾರೆ.
ರಾಜವೀರ್ ದಿಲೇರ್ ಅವರು ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಇವರಿಗೆ ಬಿಜೆಪಿ ಟಿಕೆಟ್ ಕೊಡಲು ನಿರಾಕರಿಸಿತ್ತು. ಬದಲಾಗಿ ಅನುಪ್ ಪ್ರಧಾನ್ ಅವರನ್ನು ಕಣಕ್ಕಿಳಿಸಿದೆ. 2019 ರ ಲೋಕಸಭಾ ಚುನಾವಣೆಯಲ್ಲಿ ರಾಜ್ವಿರ್ ದಿಲೇರ್ 260,208 ಮತಗಳ ಅಂತರದಿಂದ ಗೆದ್ದಿದ್ದರು. ರಾಜ್ವೀರ್ ದಿಲೆರ್ 684,299 ಮತಗಳನ್ನು ಪಡೆದಿದ್ದು, ಸಮಾಜವಾದಿ ಪಕ್ಷದ ರಾಮ್ಜಿ ಲಾಲ್ ಸುಮನ್ ಅವರನ್ನು ಸೋಲಿಸಿದ್ದರು ಎನ್ನಲಾಗಿದೆ.