ಗದಗ: ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ಹುಟ್ಟು ಹಬ್ಬವನ್ನು ಗದಗ ನಗರದ ವಿರೇಶ್ವರ ಪುಣ್ಯಾಶ್ರಮದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮದಿಂದ ಆಚರಿಸಿದರು.
ಪುಣ್ಯಾಶ್ರಮದ ಗುರು ಪುಟ್ಟಯ್ಯಜ್ಜನವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಬಿಎಸ್ ವೈ ಕಟೌಟ್ ಗೆ ಹೂವಿನ ಮಾಲೆ ಹಾಕಿ ಜೈಕಾರ ಹಾಕಿದರು.
![Demo](https://ainlivenews.com/wp-content/uploads/2023/12/spoorthi-1.jpg)
ನಂತರ ಪುಣ್ಯಾಶ್ರಮದ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ, ಕಾರ್ಯಕರ್ತರು ಕೂಡ ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. ನಗರಸಭೆ ಅಧ್ಯಕ್ಷೆ ಉಷಾ ದಾಸರ, ವಿಜಯೇಂದ್ರ ಅಭಿಮಾನಿ ಸಂಘದ ಮುಖಂಡ ಸುಧೀರ ಕಾಟಿಗಾರ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)