ನಿರ್ಮಾಣ ಹಂತದ ಕಟ್ಟಡ ಕುಸಿತ: 16 ಕಾರ್ಮಿಕರು ಸಿಲುಕಿರುವ ಶಂಕೆ!

ಬೆಂಗಳೂರು:- ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿರುವ ಘಟನೆ ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ಜರುಗಿದೆ. ಐಶ್ವರ್ಯ ಮೇಲೆ ಗುಡುಗಿದ ಮಾನಸ: ನನ್ನ ಗುಣ ಡಿಸೈಡ್‌ ಮಾಡೋಕೆ ನೀನ್ಯಾವಳು ಎಂದು ಏಕವಚನದಲ್ಲೇ ಗುಡುಗು! ಇನ್ನು ಕಟ್ಟಡ ಅವಶೇಷಗಳಡಿ 16 ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದ್ದು, ಹೆಣ್ಣೂರು ಸಮೀಪದ ಬಾಬುಸಾ​ಬ್​ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದುಬಿದ್ದಿದೆ. ಕಾರ್ಮಿಕರ ರಕ್ಷಣಾ ಕಾರ್ಯಚರಣೆ ನಡೆಯುತ್ತಿದ್ದು, ಸುಮಾರು 16 ಕಾರ್ಮಿಕರು ಸಿಲುಕಿರಬಹುದು ಎಂದು ಶಂಕಿಸಲಾಗಿದೆ.