ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಂಡಳ್ಳಿ ಹೊರವಲಯದ ತೆಳ್ಳನೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ವೊಂದು ಉರುಳಿ ಬಿದ್ದು ಬಸ್ ಕ್ಲೀನರ್ ಸ್ಥಳದಲ್ಲಿ ಸಾವನ್ನಪ್ಪಿದ್ದು 30ಕ್ಕೂ ಪ್ರಯಾಣಿಕರು ಗಾಯಗೊಂಡ ಘಟನೆ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ದೊಡ್ಡಿಂದುವಾಡಿ ಗ್ರಾಮದ ನವೀನ್(38) ಎಂಬಾತಾನೆ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಶಾಗ್ಯ ಗ್ರಾಮದ ಆದಿಜಾಂಭವ ಸಮುದಾಯಕ್ಕೆ ಸೇರಿದ ಜನರು ನಿಶ್ಚಿತಾರ್ಥ ಕಾರ್ಯಕ್ರಮದ ನಿಮಿತ್ತ ಶಾಗ್ಯಗ್ರಾಮದಿಂದ ಖಾಸಗಿ ಬಸ್ ನಲ್ಲಿ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹಳ್ಳಿಯೊಂದಕ್ಕೆ ತೆರಳಿದ್ದರು. ನಂತರ ಕಾರ್ಯಕ್ರಮವನ್ನು ಮುಗಿಸಿಕೊಂಡು ಶಾಗ್ಯ ಗ್ರಾಮಕ್ಕೆ ಹಿಂತಿರುಗಿ ಬರುವಾಗ ಬಂಡಳ್ಳಿ ತೆಳ್ಳನೂರು ಮಾರ್ಗದ ಕಾಯಿ ಒಡೆಯುವ ಕಲ್ಲಿನ ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದೆ.
ಕೆ 10. 2975 ನಂಬರ್ ಖಾಸಗಿ , ಬಸ್ ಪಲ್ಟಿಯಾಗಿ ಬಸ್ ಕ್ಲೀನರ್ ಬಸ್ಸಿನ ಚಕ್ರಕ್ಕೆ ಸಿಲುಕಿ ಸ್ಥಳದಲ್ಲಿ ಮೃತಪಟ್ಟಿದ್ದಾನೆ. ಬಸ್ಸಿನಲ್ಲಿದ್ದ ಸುಮಾರು 30ಕ್ಕೂ ಹೆಚ್ಚು ಜನರಿಗೆ ಕೈಕಾಲುಗಳಿಗೆ ಗಂಭೀರವಾದ ಗಾಯಗಳಾಗಿದೆ. ಘಟನೆಯ ಮಾಹಿತಿ ಅರಿತ ಸಮೀಪದ ಗ್ರಾಮಸ್ಥರು ಆಗಮಿಸಿ, ಬಸ್ಸಿನಲ್ಲಿದ್ದ ಜನರನ್ನು ಖಾಸಗಿ ವಾಹನಗಳ ಮೂಲಕ ಹನೂರು ಕಾಮಗೆರೆ ಕೊಳ್ಳೇಗಾಲ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ರವಾನಿಸಿದ್ದಾರೆ
ಬಳಿಕ ಸ್ಥಳಕ್ಕೆ ಆಗಮಿಸಿದ ಹನೂರು ಹಾಗೂ ಕೊಳ್ಳೇಗಾಲ ಪೊಲೀಸರು ಮೃತ ದೇಹವನ್ನು ಜೆಸಿಬಿ ಮುಖಾಂತರ ಹೊರ ತೆಗೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.