ಚಾಮರಾಜನಗರ: ಖಾಸಗಿ ಬಸ್ ಬೈಕಿಗೆ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕಿನ ಸಿಂಗನಲ್ಲೂರು ಬಳಿ ನಡೆದಿದೆ. ಅಪಘಾತದಲ್ಲಿ ಸಿಂಗನಲ್ಲೂರು ಗ್ರಾಮದ ಶ್ರೀಧರ್ ಸಾವನ್ನಪ್ಪಿದ ದುರ್ಧೈವಿಯಾಗಿದ್ದು,
ರೈತರೇ ಗಮನಿಸಿ.. ಸಪೋಟ ಹಣ್ಣಿನ ಕೃಷಿಯಿಂದ ಗಳಿಸಬಹುದು ಲಕ್ಷಗಟ್ಟಲೇ ಆದಾಯ..!
ಹನೂರು ಪಟ್ಟಣದಲ್ಲಿ ಬಾಳೆಹಣ್ಣು ವ್ಯಾಪಾರ ಮಾಡಿಕೊಡುತ್ತಿದ್ದ ಮೃತ ಶ್ರೀಧರ್, ಕಾರ್ಯನಿಮಿತ್ತ ಕಾಮಗೆರೆ ಬಳಿ ಆಗಮಿಸಿ ತಮ್ಮ ಸ್ವಗ್ರಾಮಕ್ಕೆ ತೆರಳುತ್ತಿದ್ದಂತಹ ಸಂದರ್ಭದಲ್ಲಿ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಹನೂರು ಪೋಲೀಸರು ಭೇಟಿ ಪರಿಶೀಲಿಸಿ ಕೇಸು ದಾಖಲಿಸಿಕೊಂಡು ಕ್ರಮಕೈಗೊಂಡಿದ್ದಾರೆ.