ಕಲಬುರ್ಗಿ:- ಶಾಲಾ ವಾಹನ ಬಸ್ ಹರಿದು ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.
ನಗರದ ಸಂಗಮೇಶ್ವರ ಬಡಾವಣೆಯಲ್ಲಿ ಘಟನೆ ನಡೆದಿದ್ದು ಎರಡು ವರ್ಷದ ಮನೋಜ್ ಸಾವನ್ನಪ್ಪಿದ ದುರ್ದೈವಿ..ನ್ಯಾಷನಲ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ವಾಹನದಿಂದ ಅವಘಡ ನಡೆದಿದ್ದು ಘಟನೆ ನಂತ್ರ ಬಸ್ ಚಾಲಕ ಪರಾರಿಯಾಗಿದ್ದಾನೆ.
ರೊಚ್ಚಿಗೆದ್ದ ಜನ ಬಸ್ ಮೇಲೆ ಕಲ್ಲುತೂರಾಟ ಮಾಡಿ ಗಾಜು ಪುಡಿಪುಡಿ ಮಾಡಿದ್ದಾರೆ..ಸ್ಥಳಕ್ಕೆ ಸಂಚಾರಿ ಪೊಲೀಸರು ಭೇಟಿ ಪರಿಶೀಲನೆ ಮಾಡಿದ್ದಾರೆ..