ಗದಗ: ಬಸ್ ಕೊರತೆ ಹಾಗೂ ಬಸ್ ನಿಲುಗಡೆ ಮಾಡದ ಹಿನ್ನೆಲೆ ಗದಗ ಹೊರವಲಯದ ಮಲ್ಲಸಮುದ್ರ ಕ್ರಾಸ್ ಬಳಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ರಸ್ತೆ ಬಂದ್ ಮಾಡಿ, ಬಸ್ ಗಳನ್ನು ತಡೆದು ನಿಲ್ಲಿಸಿ ರಸ್ತೆಗೆ ಅಡ್ಡಲಾಗಿ ಕಲ್ಲುಗಳನ್ನಿಟ್ಟು ಆಕ್ರೋಶ ವ್ಯಕ್ತಪಡಿಸದರು. ಮಲ್ಲಸಮುದ್ರ ಗ್ರಾಮಕ್ಕೆ ಶಾಲಾ ಕಾಲೇಜು ಸಮಯಕ್ಕೆ ಬಸ್ ಗಳನ್ನು ಬಿಡಬೇಕು,
ಗ್ರಾಮಕ್ಕೆ ಬಸ್ ಗಳ ನಿಲುಗಡೆ ಮಾಡಬೇಕು ಅಂತಾ ಆಗ್ರಹಿಸಿ ಏಕಾಏಕಿ ಪ್ರತಿಭಟನೆ ಮಾಡಿದ್ರಿಂದಾಗಿ ಕಿಲೋಮೀಟರ್ ಗಟ್ಟಲೆ ಸಾಲುಗಟ್ಟಿ ವಾಹನಗಳು ನಿಂತವು. ಇದರಿಂದ ಪ್ರಯಾಣಿಕರು ಹಾಗೂ ಜಿಮ್ಸ್ ಆಸ್ಪತ್ರೆಗೆ ತೆರಳೋ ರೋಗಿಗಳ ಪರದಾಟ ನಡೆಸುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. ಸ್ಥಳಕ್ಕೆ ಸಾರಿಗೆ ಸಂಸ್ಥೆ ಸಿಬ್ಬಂದಿಗಳು ಬರಬೇಕು ಅಂತಾ ಪಟ್ಟು ಹಿಡಿದ ವಿದ್ಯಾರ್ಥಿಗಳಿಗೆ ಗ್ರಾಮಸ್ಥರು ಸಾಥ್ ನೀಡಿದರು.
![Demo](https://ainlivenews.com/wp-content/uploads/2023/12/spoorthi-1.jpg)
![](https://ainlivenews.com/wp-content/uploads/2024/01/Ad-Banner-copy-scaled.jpg)