MP Election: ಕೊಳ್ಳೇಗಾಲದಲ್ಲಿ ಭರ್ಜರಿ ಪ್ರಚಾರ ಕೈಗೊಂಡ BY ವಿಜಯೇಂದ್ರ!

ಚಾಮರಾಜನಗರ:- ಜನಪದ ಕಲೆಗಳ ತವರೂರು ಗಡಿ ಜಿಲ್ಲೆ ಚಾಮರಾಜನಗರದ ಕೊಳ್ಳೇಗಾಲದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಇಂದು ಅಬ್ಬರದ ಪ್ರಚಾರ ಕೈಗೊಂಡಿದ್ದಾರೆ. ಚಾಮರಾಜನಗರ ಲೋಕಸಭೆ ಕ್ಷೇತ್ರದ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಹೀಗಾಗಿ ಬಿಜೆಪಿ ಭರ್ಜರಿ ಪ್ರಚಾರ ಕೈಗೊಂಡಿದೆ. ಇಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹಾಗೂ ಹನೂರಲ್ಲಿ ಭರ್ಜರಿ ರೋಡ್ ಶೋ ಜರುಗಿದ್ದು, ಚಾಮರಾಜನಗರ ಲೋಕಸಭಾಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬೃಹತ್ ಶಕ್ತಿ ಪ್ರದರ್ಶನ ನಡೆದಿದೆ. MP Election: ಕುಣಿಗಲ್ ನಲ್ಲಿ ನಿಲ್ಲುತ್ತಿಲ್ಲ ರಕ್ತ … Continue reading MP Election: ಕೊಳ್ಳೇಗಾಲದಲ್ಲಿ ಭರ್ಜರಿ ಪ್ರಚಾರ ಕೈಗೊಂಡ BY ವಿಜಯೇಂದ್ರ!