ಚಾಮರಾಜನಗರ: ಬಿಜೆಪಿ ಕಾಂಗ್ರೆಸ್ ಗೆ ಪ್ರತಿಷ್ಟೆಯ ಕಣವಾದ ಚಾಮರಾಜನಗರ ಲೋಕಸಭೆ ಎಸ್.ಸಿ ಮೀಸಲು ಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅಬ್ಬರದ ಪ್ರಚಾರ ನಡೆಸಿದ್ದಾರೆ. ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಹಾಗು ಹನೂರು ಪಟ್ಟಣದಲ್ಲಿ ಬಿಜೆಪಿ-ಜೆಡಿಎಸ್ ಜಂಟಿ ಪ್ರಚಾರ ನಡೆಸುತ್ತಿದ್ದು,
ಸ್ಥಳೀಯ ಜೆಡಿಎಸ್ ಶಾಸಕ ಮಂಜುನಾಥ್ ಹಾಗು ಬಿಜೆಪಿ ನಾಯಕರ ಜೊತೆ ಎನ್.ಡಿ.ಎ ಅಭ್ಯರ್ಥಿ ಎಸ್.ಬಾಲರಾಜ್ ಪರ ಬಿವೈ ವಿಜಯೇಂದ್ರ ಬೃಹತ್ ರೋಡ್ ಶೋ ಮೂಲಕ ದಲಿತ ಮತಗಳೇ ಹೆಚ್ಚಾಗಿರುವ ಭಾಗದಲ್ಲಿ ದಲಿತ ಮತಗಳ ಕ್ರೋಡೀಕರಣಕ್ಕೆ ತಂತ್ರ ಎಣೆದಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Old Pension Scheme: ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್: ಹಳೆಯ ಪಿಂಚಣಿಗೆ ಮಹತ್ವದ ಆದೇಶ
ರೋಡ್ ಶೋ ಗೂ ಮುನ್ನ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿವೈ ವಿಜಯೇಂದ್ರ, ಕಾಂಗ್ರೆಸ್ ಪಕ್ಷದವರು ಹಣ ಬಲ, ತೋಳ್ಬಲದೊಂದಿಗೆ ಪ್ರಚಾರ ನಡೆಸಲು ಮುಂದಾಗಿದ್ದಾರೆ, ಆದರೆ ಈ ಬಾರಿ ಮತದಾರರು ತೀರ್ಮಾನ ಮಾಡಿದ್ದಾರೆ, ಬೆಂಗಳೂರು ಗ್ರಾಮಾಂತರದಲ್ಲಿ ನಮ್ಮ ಅಭ್ಯರ್ಥಿ ಡಾ.ಮಂಜುನಾಥ್ ಗೆದ್ದೇ ಗೆಲ್ಲುತ್ತಾರೆ, ಚಾಮರಾಜನಗರದಲ್ಲೂ ಸಜ್ಜನ ವ್ಯಕ್ತಿಯಾದ ಬಾಲರಾಜ್ ಗೆಲುವು ಶತಸಿದ್ದ ಎಂದಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)