ಬೆಂಗಳೂರು: ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ, ಟ್ರಾಫಿಕ್ ಸಂಕಷ್ಟಗಳಿಗೆ ಪರಿಹಾರ ರೂಪವಾಗಿ ಬಂದಿರುವ ನಮ್ಮ ಮೆಟ್ರೋದ ಮೂರನೇ ಹಂತದ ಯೋಜನೆಯ ಕಾಮಗಾರಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
BIGG BREAKING: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ʼಗೆ ಹೃದಯಾಘಾತ: ಆಸ್ಪತ್ರೆಗೆ ದಾಖಲು
ಬೆಂಗಳೂರಿನ ಜೆ.ಪಿ. ನಗರದಿಂದ ಹೆಬ್ಬಾಳವನ್ನು ಸಂಪರ್ಕಿಸುವ ಸುಮಾರು 44 ಕಿ.ಮೀ. ಉದ್ದದ ಹೊರ ವರ್ತುಲ ಮೆಟ್ರೋ ರಿಂಗ್ ರೋಡ್ ಇದಾಗಿದೆ. ಈ ಯೋಜನೆಯನ್ನು ಸುಮಾರು 15,611 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಮೆಟ್ರೋ ಮೂರನೇ ಹಂತ ಹಲವು ಪ್ರಮುಖ ಭಾಗಗಳನ್ನು ಸಂಪರ್ಕಿಸುತ್ತದೆ. ಹೆಬ್ಬಾಳ – ಗೊರುಗುಂಟೆಪಾಳ್ಯ-ಕನಕಪುರ ರಸ್ತೆ, ಜೆಪಿ ನಗರ ಮೆಟ್ರೋ ನಿಲ್ದಾಣಗಳು ಇದರಲ್ಲಿ ಬರಲಿವೆ. ಇದಕ್ಕೆ ಬೇಕಾಗುವ ಖರ್ಚಿನ ಮೊತ್ತದಲ್ಲಿ ಶೇ. 15-16 ಭಾಗವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಉಳಿದ ಶೇ. 85 ಭಾಗವನ್ನು ರಾಜ್ಯ ಸರ್ಕಾರ ಭರಿಸಲಿದೆ ಎಂದು ಸಂಪುಟ ಸಭೆಯ ಬಳಿಕ ವಿವರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ ಹೇಳಿದರು.