ಮೈಸೂರು: ಲೋಕಸಭಾ ಕ್ಷೇತ್ರದ ಚುನಾವಣಾ ಅಖಾಡ ರಂಗೇರಿದ್ದು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಬಿರುಸುಗೊಂಡಿದೆ. ಬಿಜೆಪಿ ಅಭ್ಯರ್ಥಿಐೂ ಆಗಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಅವರು ಈಗಾಗಲೇ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.
Grama panchayat jobs: ಪರೀಕ್ಷೆ ಇಲ್ಲದೆ ನೇರ ನೇಮಕಾತಿ..!ಜಸ್ಟ್ PUC ಪಾಸಾದರೆ ಸಾಕು – ತಿಂಗಳಿಗೆ ₹63,000 ಸಂಬಳ.!
ಹಾಲಿ ಸಂಸದ ಪ್ರತಾಪ್ ಸಿಂಹ ಸಹ ಯದುವೀರ್ ಅವರೊಂದಿಗೆ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ.ಚುನಾವಣಾ ಪ್ರಚಾರ (Election Campaign) ಸಂಬಂಧ ಮೈಸೂರಿನ ಖಾಸಗಿ ಹೋಟೆಲ್ನಲ್ಲಿ ಮಾಧ್ಯಮಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಯದುವೀರ್ ಮಾತನಾಡಿದ್ದಾರೆ.
ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ:
ನಮ್ಮ ತಂದೆ ನಾಲ್ಕು ಬಾರಿ ಸಂಸದರಾಗಿದ್ದರು. ನಮಗೆ ಎಲ್ಲ ಪಕ್ಷದವರೊಂದಿಗೆ ಸಂಬಂಧ ಇದೆ. ನನ್ನ ಪರಿಕಲ್ಪನೆಗೆ ಬಿಜೆಪಿಯೊಂದಿಗೆ ಹೊಂದಾಣಿಕೆ ಇದೆ. ಜನರಿಗೆ ಅರಮನೆ ಬಗ್ಗೆ ಭಾವನಾತ್ಮಕ ಸಂಬಂಧ ಇದೆ. ಸಂವಿಧಾನದ (Constitution) ಅಡಿಯಲ್ಲಿ ಎಲ್ಲರೂ ಸಮಾನರು. ನಾನೂ ಸಹ ಸಾಮಾನ್ಯ ಸಂಸದನ ರೀತಿ ಕೆಲಸ ಮಾಡುತ್ತೇನೆ. ಆಧುನಿಕ ತಂತ್ರಜ್ಞಾನದ ಮೂಲಕ ಸಂಪರ್ಕ ಇಟ್ಟುಕೊಳ್ಳಬಹುದು.
ನೀವು ಅರಮನೆಗೆ ಬರಬೇಕಿಲ್ಲ, ನಾನೇ ಅರಮನೆಯಿಂದ ಹೊರಗೆ ಬರುತ್ತೇನೆ. ನಾನು ರಾಜ ಅಂತ ಇದನ್ನು ಹೇಳಿಲ್ಲ. ಅರಮನೆಗೆ ಒಂದು ಪರಂಪರೆ ಇದೆ. ಅದನ್ನು ಹೊರತುಪಡಿಸಿ ನಾನು ಸಾಮಾನ್ಯನಾಗಿ ಇರುತ್ತೇನೆ. ನನ್ನನ್ನು ಸಂಸದ, ಪ್ರತಿನಿಧಿ ಹೇಗೆ ಬೇಕಾದರೂ ಕರೆಯಿರಿ ಎಂದು ಹೇಳಿದ್ದಾರೆ.