ಬೆಂಗಳೂರು :- ಸಿದ್ದರಾಮಯ್ಯರಂತಹ ನಾಯಕರನ್ನು ಬೇಡ ಅನ್ನಲು ಸಾಧ್ಯನಾ ಎಂದು ಮಹದೇವಪ್ಪ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಸಿದ್ದರಾಮಯ್ಯರಂತ ಮಾಸ್ ಲೀಡರ್ ಸಕ್ರಿಯ ರಾಜಕಾರಣದಲ್ಲಿ ಇರಬೇಕು. ಸಿದ್ದರಾಮಯ್ಯ ಮಾಸ್ ಲೀಡರ್. ಅಂತಹ ಮಾಸ್ ಲೀಡರ್ನ ಯಾರಾದರು ಬೇಡ ಅಂತಾರೆ, ಯಾವುದಾದರು ಪಕ್ಷ ಬೇಡ ಅನ್ನುತ್ತಾ ಎಂದರು.
ಸಿದ್ದರಾಮಯ್ಯ ಅವರು ಆರೋಗ್ಯವಾಗಿರುವವರೆಗೆ ಫಿಟ್ ಆಗಿರುವವರೆಗೆ ಸಕ್ರಿಯ ರಾಜಕಾರಣದಲ್ಲಿ ಚುನಾವಣಾ ರಾಜಕಾರಣದಲ್ಲಿ ಇರಬೇಕು. ಪಾರ್ಟಿ ದೃಷ್ಟಿಯಿಂದ, ರಾಜ್ಯದ ದೃಷ್ಟಿಯಿಂದ ರಾಷ್ಟ್ರದ ದೃಷ್ಟಿಯಿಂದ ಸಿದ್ದರಾಮಯ್ಯ ಸಕ್ರಿಯ ರಾಜಕಾರಣದಲ್ಲಿ ಇರಬೇಕು. ಅನಿವಾರ್ಯ ಅಂತ ಹೇಳಲ್ಲ. ನಾನೇ ಆಗಲಿ ಯಾರೇ ಆಗಲಿ ಅನಿವಾರ್ಯ ಅಲ್ಲ. ಸಿದ್ದರಾಮಯ್ಯರಂತ ಮಾಸ್ ಲೀಡರ್ ಸಕ್ರಿಯವಾಗಿ ಇರಬೇಕು. ಸಿದ್ದರಾಮಯ್ಯ ಮಾಸ್ ಲೀಡರ್. ಎಲ್ಲಾ ಆಯಾಮದಲ್ಲೂ ನಾಯಕತ್ವ ಅಗತ್ಯವಿದೆ. ಒನ್ ಮ್ಯಾನ್ ಶೋ ಆಗಲ್ವಲ್ಲ. ನಾವೆಲ್ಲರೂ ಅವರ ಜೊತೆ ಸೇರಬೇಕು. ಹೊಸನಾಯಕತ್ವ ಬರುವವರೆಗೆ ಸಿದ್ದರಾಮಯ್ಯ ಇರಬೇಕು ಎಂದು ಹೇಳಿದರು.