ಚಾಮರಾಜನಗರ :-ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಮದ್ದೂರು ವಲಯದಲ್ಲಿ ಹಾದು ಹೋಗುವ ಗುಂಡ್ಲುಪೇಟೆ-ಸುಲ್ತಾನ್ ಬತ್ತೇರಿ ಹೆದ್ದಾರಿಯಲ್ಲಿ ತಡರಾತ್ರಿ ಇನ್ನೋವಾ ಕಾರು ಕಾಡು ನಾಯಿ ಹಾಗೂ ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪಿವೆ.
ಬೆಸ್ಕಾಂಗೆ ಕೋಟಿ ಕೋಟಿ ನಷ್ಟ; ಮಳೆಗಾಲದ ಆರಂಭದಲ್ಲಿ 8 ಜಿಲ್ಲೆಗಳಲ್ಲಿ ಹಾನಿ ಆಗಿದೆಷ್ಟು ಗೊತ್ತಾ!?
ಕೇರಳ ಮೂಲದ ಇನ್ನೋವಾ ಕಾರು ಕೆಎಲ್ 50 ಎಎಫ್ 331 ಕಾರು ರಾತ್ರಿ ಕೇರಳದ ಸುಲ್ತಾನ್ ಬತ್ತೇರಿ ಕಡೆಗೆ ತೆರಳುತ್ತಿದ್ದಾಗ 5 ವರ್ಷದ ಕಾಡು ನಾಯಿ,3 ವರ್ಷದ ಜಿಂಕೆಯನ್ನು ಡಿಕ್ಕಿ ಹೊಡೆದ ಪರಿಣಾಮ ಸಾವನ್ನಪ್ಪಿದೆ. ಇನ್ನೋವಾ ಕಾರನ್ನು ಅರಣ್ಯ ಇಲಾಖೆಯ ಉಪ ವಲಯ ಅರಣ್ಯಾಧಿಕಾರಿ ಹಾಗೂ ಅರಣ್ಯ ಸಿಬ್ಬಂದಿ ಹಿಡಿದು ಕಾರಿನ ಚಾಲಕ ಸ್ಟೀಫನ್ ಸನ್ನಿ ಹಾಗೂ ಕಾರನ್ನು ವಶಕ್ಕೆ ಪಡೆದು ಕ್ರಮಕೈಗೊಂಡಿದ್ದಾರೆ.
ಬಂಡೀಪುರ ಹುಲಿ ಯೋಜನೆಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ನಿರ್ದೇಶಕ ಎಸ್.ಪ್ರಭಾಕರನ್ ಸೂಚನೆಯಂತೆ ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ. ರವೀಂದ್ರ ಬಂಧಿತ ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.
ಬಂಧಿತ ಆರೋಪಿಯನ್ನು ವಿಚಾರಣೆ ಬಳಿಕ ನ್ಯಾಯಾಧೀಶರ ಬಳಿಗೆ ಹಾಜರು ಪಡಿಸಲಾಗಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಎಸಿಎಫ್ ಜಿ.ರವೀಂದ್ರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.