ಮೈಸೂರು: ಮುಂದಿನ ದಿನಗಳಲ್ಲಿ ಎದುರಾಗುವ ಬರಗಾಲದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಕಟ್ಟೆಚ್ಚರವಹಿಸಬೇಕು. ಜನ-ಜಾನುವಾರುಗಳಿಗೆ ನೀರು,ಮೇವಿನ ಕೊರತೆಯಾಗದಂತೆ ಮುಂಜಾಗ್ರತಾ ಕ್ರಮವಹಿಸಬೇಕು. ಅಧಿಕಾರಿಗಳು ಐದಾರು ತಿಂಗಳ ಕಾಲ ಹಳ್ಳಿಗಳಿಗೆ ತಪ್ಪದೆ ಭೇಟಿ ನೀಡಿ ಪರಿಸ್ಥಿತಿ ಅರಿತು ಕೆಲಸ ಮಾಡಬೇಕು ಎಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅಧಿಕಾರಿಗಳಿಗೆ ತಾಕೀತು ಮಾಡಿದರು. ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಚಾಮುಂಡೇಶ್ವರಿ ಕ್ಷೇತ್ರದ ವ್ಯಾಪ್ತಿಗೆ ಬರುವ ನಗರಸಭೆ,ಪಟ್ಟಣ ಪಂಚಾಯಿತಿ,ಗ್ರಾಪಂ ಅಧಿಕಾರಿಗಳ, ವಿ.ಎ. ಸರ್ವೆಯರ್ ಗಳ ಸಭೆ ನಡೆಸಿದ ಅವರು, ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಗಳಲ್ಲಿ ಜನ-ಜಾನುವಾರಿಗೆ ಕುಡಿುುಂವ ನೀರು ಸರಬರಾಜಿನಲ್ಲಿ ಕೊರತೆ ಆಗದಂತೆ ನೋಡಿಕೊಳ್ಳಬೇಕು’ ಎಂದು ಸೂಚಿಸಿದರು.
ಬೇಸಿಗೆ ಬರಲಿದ್ದು, ನೀರು ಪೂರೈಕೆಗೆ ಸಂಬಂಧಿಸಿದಂತೆ ಪೂರ್ವ ತಾಂರಿ ವಾಡಿಕೊಳ್ಳಬೇಕು. ಈ ವಿಷುಂದಲ್ಲಿ ನಿರ್ಲಕ್ಷ್ಯ ವಹಿಸಬಾರದು’ ಎಂದು ನಿರ್ದೇಶನ ನೀಡಿದರು. ಕ್ಷೇತ್ರದ ಗ್ರಾಮ ಪಂಚಾಯಿತಿವಾರು ಪ್ರಗತಿ ಪರಿಶೀಲನೆ ನಡೆಸಿದ ಶಾಸಕರು, ಕುಡಿುುಂವ ನೀರಿನ ಪರಿಸ್ಥಿತಿ, ನರೇಗಾ ಸೇರಿದಂತೆ ಅಭಿವೃದ್ಧಿ ಕಾಂರ್ುಕ್ರಮಗಳ ಬಗ್ಗೆ ಪಿಡಿಒಗಳಿಂದ ವಾಹಿತಿ ಪಡೆದು ಚಾಟಿ ಬೀಸಿದರು.ಮನ್ರೇಗಾ,೧೫ನೇ ಹಣಕಾಸು ಆಯೋಗದ ಅನುದಾನ, ರಾಜ್ಯ,ಕೇಂದ್ರಸರ್ಕಾರದಿಂದ ಬರುವ ಅನುದಾನವನ್ನು ಬಳಸಿಕೊಂಡು ಮೊದಲು ಕುಡಿಯುವ ನೀರಿಗೆ ಆದ್ಯತೆ ಕೊಡಬೇಕು.
ಬರಗಾಲ ನಿರ್ವಹಣೆಯೇ ನಿಮಗೆ ಮೊದಲ ಆದ್ಯತೆಯ ಕೆಲಸ ಆಗಬೇಕು. ೧೫ನೇ ಹಣಕಾಸು ಆಯೋಗದಿಂದ ಬರುವ ಅನುದಾನದಲ್ಲಿ ನೀರಿನ ಕಾಮಗಾರಿಗಳಿಗೆ ಒತ್ತು ಕೊಡಬೇಕು ಎಂದು ಸೂಚಿಸಿದರು. ತಾಲ್ಲೂಕಿನ ಬೀರಿಹುಂಡಿುಂಲ್ಲಿ ಕುಡಿುುಂವ ನೀರಿಗೆ ಸಮಸ್ಯೆ ಇದೆ. ನಾಲ್ಕು ಕೊಳವೆಬಾವಿುಂಲ್ಲಿನ ನೀರಿನ ಇಳುವರಿ ಕಡಿಮೆಾಂಗಿದೆ. ಆದ್ದರಿಂದ ಖಾಸಗಿುಂವರ ಜೊತೆ ಒಪ್ಪಂದ ವಾಡಿಕೊಳ್ಳಲಾಗಿದೆ.
ಅವರಿಗೆ ಸೇರಿದ ಕೊಳವೆಬಾವಿಗಳಿಂದ ನೀರು ಪಡೆುಂಲಾಗುವುದು. ೧೫ ದಿನಗಳಲ್ಲಿ ಪೈಪ್ಲೈನ್ ವಾಡಿ ಪೂರೈಸಲು ಕ್ರಮ ವಹಿಸಲಾಗುವುದು’ ಎಂದು ಅಲ್ಲಿನ ಪಿಡಿಒ ತಿಳಿಸಿದರು. ‘ಶಾಲೆಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಲು ಶಿಕ್ಷಕರು ಆದ್ಯತೆ ನೀಡಬೇಕು. ಉದ್ಯೋಗ ಖಾತ್ರಿ ೋಂಜನೆುಂಲ್ಲಿ ಶಾಲಾ ಕಾಂಪೌಂಡ್, ಆಟದ ಮೈದಾನ ಹಾಗೂ ಸ್ಮಶಾನ ನಿರ್ವಾಣಕ್ಕೆ ಆದ್ಯತೆ ನೀಡಬೇಕು. ಆಶ್ರುಂ ೋಂಜನೆಗೆ ಸಂಬಂಧಿಸಿದಂತೆ ಆಾಂ ಗ್ರಾಮಗಳಲ್ಲೇ ಸರ್ಕಾರಿ ಜಾಗವನ್ನು ಕೂಡಲೇ ಗುರುತಿಸಬೇಕು’ ಎಂದು ದೇವೇಗೌಡ ಸೂಚಿಸಿದರು.