ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳ (Customs Officers) ಕಾರ್ಯಾಚರಣೆ ನಡೆಸಿ ಅಕ್ರಮವಾಗಿ ಒಳ ಉಡುಪಿನಲ್ಲಿಟ್ಟುಕೊಂಡು ಚಿನ್ನ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕನ ವಶಕ್ಕೆ ಪಡೆದಿದ್ದಾರೆ.
ದುಬೈನಿಂದ ಕೆಂಪೇಗೌಡ ಏರ್ ಪೋರ್ಟ್ಗೆ (Bengaluru Aiport) ಆಗಮಿಸಿದ್ದ ಪ್ರಯಾಣಿಕನನ್ನು ಚೆಕ್ಕಿಂಗ್ ಮಾಡಿದ ವೇಳೆ ಕಸ್ಟಮ್ಸ್ ಅಧಿಕಾರಿಗಳಿಗೆ ಅನುಮಾನ ಬಂದಿದೆ. ಹೀಗಾಗಿ ಆತನನ್ನು ತೀವ್ರ ತಪಾಸಣೆ ನಡೆಸಿದಾಗ ಪೇಸ್ಟ್ ರೂಪದಲ್ಲಿ ಚಿನ್ನವನ್ನ ಪ್ಯಾಂಟ್ ನ ಸೊಂಟದ ನಡುವೆ ಮರೆಮಾಚಿ ಸಾಗಾಟಕ್ಕೆ ಯತ್ನಿಸಿದ್ದು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾನೆ.