ಬೆಂಗಳೂರು:- ಭ್ರೂಣ ಹತ್ಯೆ ಪ್ರಕರಣ-ಸ್ಕ್ಯಾನಿಂಗ್ ಕೇಂದ್ರ,ತಪಾಸಣೆ ಬಿಗಿ ಮಾಡಲಾಗುತ್ತದೆ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಭ್ರೂಣ ಹತ್ಯೆ ಪ್ರಕರಣ ಗಳಿಂದಾಗಿ ನಮ್ಮ ಇಲಾಖೆಗೆ ಅವಮಾನ ಆದಂತಾಗಿದೆ. ಭ್ರೂಣಹತ್ಯೆ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ. ಈ ವಿಚಾರದಲ್ಲಿ ಸ್ಪಷ್ಟ ಕಾನೂನುಗಳಿದ್ದು, ಅವುಗಳ ಜಾರಿ ಆಗಲೇಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಹೇಳಿದರು.
![Demo](https://ainlivenews.com/wp-content/uploads/2023/12/spoorthi-1.jpg)
ಮಂಡ್ಯ ಜಿಲ್ಲೆಯಲ್ಲಿ ನಡೆದಿರುವ ಭ್ರೂಣ ಹತ್ಯೆ ಪ್ರಕರಣದ ತನಿಖೆಯು ಪೊಲೀಸರ ಮೂಲಕ ನಡೆಯುತ್ತಿದ್ದು, ಇದಕ್ಕೆ ಆರೋಗ್ಯ ಇಲಾಖೆ ಸಂಪೂರ್ಣ ಸಹಕಾರ ನೀಡಲಿದೆ. ಪೊಲೀಸರು ಇಂತಹದೊಂದು ಜಾಲ ಪತ್ತೆ ಮಾಡಿರುವುದು ನಮ್ಮ ಇಲಾಖೆಯ ಕಣ್ತೆರೆಸಿದಂತಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆಯೂ ಎಚ್ಚರ ವಹಿಸಲಾಗುವುದು ಎಂದು ತಿಳಿಸಿದರು.
ಲಿಂಗಾನುಪಾತದಲ್ಲಿ ವ್ಯತ್ಯಯ ಇದೆ ಎಂದರೆ, ರಾಜ್ಯಾದ್ಯಂತ ಹೆಣ್ಣು ಭ್ರೂಣ ಹತ್ಯೆಗಳು ನಡೆಯುತ್ತಿವೆ ಎಂದೇ ಅರ್ಥ. ಇದರಲ್ಲಿ ಯಾವುದೇ ಅನುಮಾನಗಳಿಲ್ಲ. ಇದೊಂದು ಸಾಮಾಜಿಕ ಪಿಡುಗಾಗಿದೆ. ಇದಕ್ಕೆ ಕಡಿವಾಣ ಹಾಕಲೇಬೇಕಿದೆ ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)