ಕಲಬುರ್ಗಿ:- ಕೃಷಿ ಪರಿಕರಗಳನ್ನ ಕಾಳಸಂತೆಯಲ್ಲಿ ಮಾರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಅಮಾನತು ಮಾಡಲಾಗಿದೆ.
ಟ್ಯ್ಯಾಕ್ಟರ್ನಲ್ಲಿ 100 ಎರೆಹುಳು ಗೊಬ್ಬರದ ಚೀಲಗಳು, 30 ಪಿವಿಸಿ ಪೈಪ್ಗಳನ್ನ ಅಕ್ರಮವಾಗಿ ಫೆ. 5 ರಂದು ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಗ್ರಾಮದ ಜನರೆಲ್ಲ ಸೇರಿ ಟ್ಯ್ಯಾಕ್ಟರ್ನ್ನು ಅಡ್ಡಗಟ್ಟಿ ಪೊಲೀಸರಿಗೆ ಒಪ್ಪಿಸಿದ್ದರು. ಇದೀಗ ಅಕ್ರಮವೆಸಗಿದ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.