ಬೆಂಗಳೂರು:- ಬೆಂಗಳೂರು ವಿವಿ ಕ್ಯಾಂಪಸ್ ಹಾಸ್ಟೆಲ್ ಊಟದಲ್ಲಿ ಹುಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಡುಗೆ ಪಾಲಕನನ್ನು ಸಸ್ಪೆಂಡ್ ಮಾಡಲಾಗಿದೆ.
ಮಂಜುನಾಥ್ನನ್ನು ಅಮಾನತುಗೊಂಡ ಪಾಲಕ. ಹಾಸ್ಟೆಲ್ ಊಟದಲ್ಲಿ ಕಳಪೆ ಆಹಾರ ಸೇವಿಸಿ ವಿದ್ಯಾರ್ಥಿಗಳ ಆರೋಗ್ಯದಲ್ಲಿ ಏರುಪೇರು ಆಗಿತ್ತು. ಬುಧವಾರ ಹಾಸ್ಟೆಲ್ಗೆ ಭೇಟಿ ನೀಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು. ತನಿಖೆಯಲ್ಲಿ ಮಂಜುನಾಥ್ ಕರ್ತವ್ಯ ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆ ತಕ್ಷಣ ಸೇವೆಯಿಂದ ಅಮಾನತು ಮಾಡಲಾಗಿದೆ.
ಜ್ಞಾನಭಾರತಿ ಕ್ಯಾಂಪಸ್ ಆವರಣದಲ್ಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಬಾಲಕರ ಹಾಸ್ಟೆಲ್ನಲ್ಲಿ ಮೂರನೇ ಬಾರಿಗೆ, ಊಟದಲ್ಲಿ ಹುಳುಗಳು ಪತ್ತೆಯಾಗಿವೆ. ಯೂನಿರ್ವಸಿಟಿ ಕ್ಯಾಂಪಸ್ ಮಾತ್ರವಲ್ಲ, ಬನಶಂಕರಿಯ ಬಿಸಿಎಂ ಹಾಸ್ಟಲ್ ಊಟದಲ್ಲಿಯೂ ಜಿರಳೆ ಪತ್ತೆಯಾಗಿದೆ. ಇದ್ರಿಂದಾಗಿ ಅಡುಗೆ ಮನೆ ಬಂದ್ ಮಾಡಿ ಸ್ಟುಡೆಂಟ್ಸ್ ಆಕ್ರೋಶ ಹೊರ ಹಾಕಿದ್ದರು.
ಅವ್ಯವಸ್ಥೆ ವಿರುದ್ಧ ಸಿಡಿದೆದ್ದಿರುವ ಸ್ಟೂಡೆಂಟ್ಸ್ ಕಟ್ಟುಪಾಡು ಬದಲಾಗದು ಎಂಬ ಶೀರ್ಷಿಕೆಯಡಿ ಕವನ ಬರೆದಿದ್ದರು. ಬದಲಿಸಲು ಮುಂದೆ ಬಂದರೆ ಎತ್ತಂಗಡಿ ಕಟ್ಟಿಟ್ಟ ಬುತ್ತಿ ಎಂದು ಆಕ್ರೋಶ ಹೊರಹಾಕಿದ್ದಾರೆ.