ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣ ಸಂಬಂಧ ಶಾಸಕ ಸ್ಥಾನ ರದ್ದು ಮಾಡುವಂತೆ ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ಒತ್ತಾಯ ಕೇಳಿಬಂದಿದೆ.
ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಶಾಸಕ ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು ಆದ್ರೆ ಬುಡ್ಗ ಜಂಗಮ ಜಾತಿಗೆ ಸೇರಿದವರು ಎಂದು ನಕಲಿ ಜಾತಿ ಪ್ರಮಾಣ ಪತ್ರ ನಕಲಿ ಪ್ರಮಾಣ ಪತ್ರ ಸಲ್ಲಿಸಿ ಎಸ್ ಸಿ ಮೀಸಲಾತಿ ದುರ್ಬಳಕೆ ಮಾಡಲಾಗಿದೆ.
2013 ರಲ್ಲಿ ಮುಳಬಾಗಿಲು ಕ್ಷೇತ್ರದಲ್ಲಿ ಮೀಸಲಾತಿ ದುರುಪಯೋಗ ಪಡಿಸಿಕೊಂಡಿದ್ದಾರೆ ಅಲ್ಲದೆ ದಲಿತರನ್ನು ಲೇ ಲೇಕರ್ ಶೂಗೆ ಹೋಲಿಸಿದ್ದರು ಕೊತ್ತೂರು ಮಂಜುನಾಥ್ ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು ರಾಜೀನಾಮೆ ಕೊಟ್ಟು ಮತ್ತೆ ಚುನಾವಣೆಗೆ ಬನ್ನಿ ಎಂದು ಸವಾಲ್ ಹಾಕಿದರು
ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದಿಂದ ಸವಾಲ್ ಹಾಕಿದ್ದು ಶಾಸಕ ಕೊತ್ತೂರು ಮಂಜುನಾಥ್ ವಿರುದ್ಧ ಸರ್ಕಾರ ಕ್ರಮ ಕೈಗೊಳ್ಳಬೇಕು ಹೈಕೋರ್ಟ್ ಸಹ ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚಿಸಿದೆ ಹಾಗಾಗಿ ಸಿಎಂ ಸಿದ್ದರಾಮಯ್ಯ & ಗೃಹ ಸಚಿವ ಪರಮೇಶ್ವರ್ ಕ್ರಮ ಕೈಗೊಳ್ಳಬೇಕು
ಮುಂದಿನ ಚುನಾವಣೆಯಲ್ಲಿ ಕೊತ್ತೂರು ಮಂಜುನಾಥ್ ಗೆ ದಲಿತರು ಬೆಂಬಲ ನೀಡಲ್ಲ ಸಂವಿಧಾನದ ಹೆಸರೇಳಿ ದಲಿತರ ಮೀಸಲಾತಿಯನ್ನು ಕಸಿದುಕೊಂಡಿದ್ದಾರೆ ಹಾಗಾಗಿ ಶಾಸಕ ಕೊತ್ತೂರು ಮಂಜುನಾಥ್ ಗೆ ಶಾಸಕ ಸ್ಥಾನ ರದ್ದು ಮಾಡಬೇಕೆಂದು ಆಗ್ರಹ ವ್ಯಕ್ತಪಡಿಸಿದರು.
ಈ ವೇಳೆ ದಲಿತ ಮುಖಂಡರಾದ ಹೂವಳ್ಳಿ ಪ್ರಕಾಶ್ , ದಲಿತ್ ನಾರಾಯಣಸ್ವಾಮಿ ಇತರರು ಉಪಸ್ಥಿತರಿದ್ದರು.