ಬೆಂಗಳೂರು: 2024ರ ಮೇನಲ್ಲಿ ಕಾವೇರಿ ಹಂತ-5 ಕಾರ್ಯಾರಂಭಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. 5550 ಕೋಟಿ ರೂ. ವೆಚ್ಚದಲ್ಲಿ ಬಿಡಬ್ಲ್ಯುಎಸ್ಎಸ್ಬಿಯಿಂದ ಯೋಜನೆ. ಪ್ರತಿ ದಿನ 12 ಲಕ್ಷ ಜನರಿಗೆ 110 ಲಕ್ಷ ಲೀಟರ್ ಕುಡಿಯುವ ನೀರು ಪೂರೈಕೆ ಮಾಡಲು ಉದ್ದೇಶಿಸಲಾಗಿದೆ. ಕಾವೇರಿ ಹಂತ-5ರಡಿ ಡಿಸೆಂಬರ್ 24ರಲ್ಲಿ ಒಳಚರಂಡಿ ಕಾಮಗಾರಿ ಪೂರ್ಣ. ಇದರಿಂದ 228 ಕಿ.ಮೀ ವ್ಯಾಪ್ತಿಯಲ್ಲಿ ಒಳಚರಂಡಿ ಕೊಳವೆ ಅಳವಡಿಕೆ ಮಾಡಲಾಗುವುದು ಎಂದು ಸಿಎಂ ಘೋಷಿಸಿದರು.
Karnataka Budget 2024: ಅಂಜನಾದ್ರಿ ಬೆಟ್ಟ, ಸುತ್ತಮುತ್ತಲ ಪ್ರದೇಶ ಅಭಿವೃದ್ಧಿಗೆ 100 ಕೋಟಿ
ಮಂಗಳೂರಿನಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಾಣ ಮಾಡಲಾಗುವುದು. 35 ಕೋಟಿ ರೂಪಾಯಿ ವೆಚ್ಚದಲ್ಲಿ ಅತ್ಯಾಧುನಿಕ ಕೃಷಿ ಸಂಕೀರ್ಣ ನಿರ್ಮಿಸಲಾಗುವುದು ಎಂದು ಸಿದ್ದರಾಮಯ್ಯ ಘೋಷಣೆ ಮಾಡಿದರು.
76 ಗೋದಾಮುಗಳ ನಿರ್ಮಾಣಕ್ಕೆ 376 ಕೋಟಿಗಳ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಜತೆಗೆ APMCಗಳಲ್ಲಿ ವಿದ್ಯುತ್ಚಾಲಿತ ವಾಹನಗಳಿಗೆ ಚಾರ್ಜಿಂಗ್ ಕೇಂದ್ರ ಸ್ಥಾಪನೆ ಮಾಡುವ ಬಗ್ಗೆಯೂ ಘೋಷಣೆ ಮಾಡಲಾಗಿದೆ. ಪೆಟ್ರೋಲ್ ಬಂಕ್ಗಳ ಮಾದರಿಯಲ್ಲಿ ಇವುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ಸಿಎಂ ಘೋಷಿಸಿದ್ದಾರೆ.