ಮಡಿಕೇರಿ:- ಅಮಿತ್ ಶಾ ಓರ್ವ ರೌಡಿಶೀಟರ್ ಎಂದು ಸಿಬಿಐ ಕೂಡ ಹೇಳಿತ್ತು ಎಂದು ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ತಮ್ಮ ಹೇಳಿಕೆ ಖಂಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಅಮಿತ್ ಶಾ ಅವರನ್ನ ರೌಡಿ ಎಂದು ನಾನೇ ಹುಟ್ಟಿಸಿಕೊಂಡು ಹೇಳಿದಂತಹ ಮಾತಲ್ಲ, ಈ ಹಿಂದೆ ಸಿಬಿಐ ಕೂಡ ಹೇಳಿತ್ತು. ಅಮಿತ್ ಶಾ ಅವರಿಗೆ ಕ್ರಿಮಿನಲ್ ಬ್ಯಾಗ್ರೌಂಡ್ ಇದೆ ಅಂತ ಹೇಳಿದೆ ಎಂದು ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.
2010ರಲ್ಲಿ ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ಪ್ರಕರಣದಲ್ಲಿ ಗುಜರಾತ್ ಕೋರ್ಟ್ಗೆ ಸಿಬಿಐ ಕೊಟ್ಟ ಹೇಳಿಕೆ ಅದು. ಅದೇ ಹೇಳಿಕೆಯನ್ನು ನಾನು ಪುನರುಚ್ಚರಿಸಿದ್ದೇನೆ ಅಷ್ಟೇ. ನನ್ನ ಹೇಳಿಕೆಯಿಂದ ಬಿಜೆಪಿಗೆ ಕೋಪ ಬಂದಿದ್ದರೇ, ಮೊದಲು ಸಿಬಿಐ ಮೇಲೆ ಅವರು ಕೋಪ ಮಾಡಿಕೊಳ್ಳಬೇಕು. ಈಗಾಗಲೇ ನನಗೆ ಚುನಾವಣಾ ಆಯೋಗ ನೋಟಿಸ್ ಕೊಟ್ಟಿದೆ. ಅದಕ್ಕೆ ನಾನು ಏನು ಉತ್ತರ ಕೊಡಬೇಕೋ ಕೊಡುತ್ತೇನೆ ಎಂದು ತಿಳಿಸಿದ್ದಾರೆ
ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದು 10 ವರ್ಷಗಳಾಗಿವೆ. ಈ ಹತ್ತು ವರ್ಷಗಳಲ್ಲಿ ದೇಶವನ್ನು ಎಷ್ಟು ಹಾಳು ಮಾಡಲು ಸಾಧ್ಯವೋ ಅಷ್ಟು ಹಾಳುಮಾಡಿದ್ದಾರೆ. ಮೋದಿ ಸರ್ಕಾರದ ಬಂದ ಮೇಲೆ ನಮ್ಮ ದೇಶ 25 ವರ್ಷ ಹಿಂದಕ್ಕೆ ಹೋಗಿದೆ. ಕೇಂದ್ರ ಸರ್ಕಾರ ಈ ಹಿಂದೆ ಜನರಿಗೆ ಏನು ಭರವಸೆ ನೀಡಿತ್ತೋ ಅದನ್ನು ನೆರವೇರಿಸಿಲ್ಲ ಎಂದು ಯತೀಂದ್ರ ವಾಗ್ದಾಳಿ ನಡೆಸಿದ್ದಾರೆ