ಬೆಂಗಳೂರು: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಯಾರ ಕಾಲದಲ್ಲಿ ಕೊಲೆ, ಅಪರಾಧ ಜಾಸ್ತಿ ಇತ್ತು ಅಂತ ದಾಖಲೆ ಬಿಡುಗಡೆ ಮಾಡಿದ್ದೇವೆ. ಇದಕ್ಕೆ ಮೊದಲು ಬಿಜೆಪಿಯವರು ಉತ್ತರ ಕೊಡಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾನೂನು ಸುವ್ಯವಸ್ಥೆ ಹದಗೆಟ್ಟ ಆರೋಪ ವಿಚಾರವಾಗಿ ಮಾತನಾಡುತ್ತಾ, “ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಚೆನ್ನಾಗಿದೆ. ಯಾರ ಕಾಲದಲ್ಲಿ ಕೊಲೆ, ಅಪರಾಧ ಜಾಸ್ತಿ ಇತ್ತು ಅಂತ ದಾಖಲೆ ಬಿಡುಗಡೆ ಮಾಡಿದ್ದೇವೆ. ಇದಕ್ಕೆ ಮೊದಲು ಬಿಜೆಪಿಯವರು ಉತ್ತರ ಕೊಡಲಿ” ಎಂದು ಟಾಂಗ್ ಕೊಟ್ಟರು.
NBCC Recruitment: ಪರೀಕ್ಷೆಯಿಲ್ಲದೆ NBCC ಕಾರ್ಪೊರೇಷನ್’ನಲ್ಲಿದೆ ಉದ್ಯೋಗಾವಕಾಶ..! ಇಂದೇ ಅರ್ಜಿ ಸಲ್ಲಿಸಿ
ಇನ್ನೂ ದೇವರಾಜೇಗೌಡ ರಿಲೀಸ್ ಮಾಡಿದ ಆಡಿಯೋದಲ್ಲಿ ಡಿ.ಕೆ.ಶಿವಕುಮಾರ್ ಧ್ವನಿ ಇರುವುದೇ ದೊಡ್ಡ ಸಾಕ್ಷಿ ಅಲ್ವೇ? ಅನ್ನುವ ಹೆಚ್ಡಿಕೆ ಹೇಳಿಕೆಗೆ, “ಕುಮಾರಸ್ವಾಮಿ ಪ್ರತಿಯೊಂದಕ್ಕೂ ಟೀಕಿಸಿ ಮಾತನಾಡುತ್ತಿದ್ದಾರೆ. ಆದರೆ ಕಾನೂನು ಚೌಕಟ್ಟು ಮತ್ತು ಎಸ್ಐಟಿ ನಿಯಮದನ್ವಯ ತನಿಖೆ ನಡೆಯುತ್ತದೆ. ಸರ್ಕಾರ ಕೂಡಾ ಇದನ್ನು ಗಮನಿಸಿಯೇ ಕೆಲಸ ಮಾಡುತ್ತದೆ” ಎಂದು ಹೇಳಿದರು.
“ಕೇಂದ್ರ ಕೂಡಾ ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಸಹಾಯ ಮಾಡಬೇಕು. ಬರೀ ಟೀಕೆ-ಟಿಪ್ಪಣಿ ಮಾಡಿದರೆ ಪ್ರಯೋಜನವಿಲ್ಲ. ಈಗಾಗಲೇ ಪಾಸ್ಪೋರ್ಟ್ ರದ್ದತಿಗೆ ಸಿಎಂ ಪತ್ರ ಬರೆದಿದ್ದಾರೆ. ಸಿಎಂ ಪತ್ರಕ್ಕೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ. ಈಗ ಅರೆಸ್ಟ್ ವಾರಂಟ್ ಹೊರಡಿಸಲಾಗಿದೆ. ಅದರ ಆಧಾರದಲ್ಲಾದರೂ ಪಾಸ್ಪೋರ್ಟ್ ರದ್ದು ಮಾಡಲಿ. ಅರೆಸ್ಟ್ ವಾರಂಟ್ ಜಾರಿಯಾಗಿರುವುದು ಕೋರ್ಟ್ನಿಂದ. ಇದನ್ನು ಈಗಾಗಲೇ ಎಸ್ಐಟಿಯವರು ಕೇಂದ್ರಕ್ಕೆ ತಿಳಿಸಿದ್ದಾರೆ” ಎಂದರು.
![](https://ainlivenews.com/wp-content/uploads/2024/01/Ad-Banner-copy-scaled.jpg)