ದೆಹಲಿ :- ಕೇಂದ್ರ ಆರೋಗ್ಯ ಸಚಿವಾಲಯವು ಬಿಸಿಲಿನ ಆಘಾತಕ್ಕೊಳಗಾಗಿರುವ (Heat Stroke) ರೋಗಿಗಳಿಗೆ ಆದ್ಯತೆಯ ಮೇರೆಗೆ ಚಿಕಿತ್ಸೆ ನೀಡುವಂತೆ ನಿರ್ದೇಶನ ನೀಡಿದೆ. ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ಜನರು ಬಿಸಿಲಿನ ಹೊಡೆತಗಳು ಮತ್ತು ಇತರ ಶಾಖ-ಸಂಬಂಧಿತ ಸಮಸ್ಯೆಗಳಿಂದ ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ನ್ಯಾಯವು ಮೇಲುಗೈ ಸಾಧಿಸಲಿ, ಸತ್ಯಮೇವ ಜಯತೆ… ರೇಣುಕಾಸ್ವಾಮಿ ಕೊಲೆ ಕೇಸ್ ಗೆ ದರ್ಶನ್ ಪತ್ನಿ ರಿಯಾಕ್ಟ್..!
ಆರೋಗ್ಯ ಸಚಿವ ಜೆಪಿ ನಡ್ಡಾ (JP Nadda) ಅವರು ಕೇಂದ್ರದಿಂದ ನಡೆಸಲ್ಪಡುವ ಸರ್ಕಾರಿ ಆಸ್ಪತ್ರೆಗಳ ಪರಿಸ್ಥಿತಿ ಮತ್ತು ಸನ್ನದ್ಧತೆಯನ್ನು ಪರಿಶೀಲಿಸಿದ್ದು, ಇದಕ್ಕಾಗಿ ವಿಶೇಷ ಘಟಕಗಳನ್ನು ಪ್ರಾರಂಭಿಸುವುದನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಇದರಿಂದಾಗಿ ರೋಗಿಗಳಿಗೆ ಉತ್ತಮವಾದ ಆರೈಕೆಯನ್ನು ನೀಡಲಾಗುತ್ತದೆ.
ದೆಹಲಿ-ಎನ್ಸಿಆರ್ನಲ್ಲಿ ತೀವ್ರತರವಾದ ಶಾಖದ ಅಲೆಗಳು ಕಳೆದ ಮೂರು ದಿನಗಳಲ್ಲಿ 10 ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿವೆ. ಕನಿಷ್ಠ 12 ಜನರು ಲೈಫ್ ಸಪೋರ್ಟ್ ನಲ್ಲಿದ್ದಾರೆ.. ಈ ಹಿನ್ನಲೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆಪಿ ನಡ್ಡಾ ನಿರ್ದೇಶನ ನೀಡಿದ್ದಾರೆ
ದೆಹಲಿಯ ಸರ್ಕಾರಿ ಸ್ವಾಮ್ಯದ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ, ಮೇ 27 ರಿಂದ ಬಿಸಿಲಿನಿಂದಾಗಿ ಕಾಯಿಲೆಗೊಳಗಾದ 45 ರೋಗಿಗಳನ್ನು ದಾಖಲಿಸಲಾಗಿದೆ. ಮೇ 27 ರಿಂದ ಆಸ್ಪತ್ರೆಯು ಇಂತಹ ಸಮಸ್ಯೆಗಳಿಂದ ಒಂಬತ್ತು ಸಾವುಗಳನ್ನು ವರದಿ ಮಾಡಿದೆ ಮತ್ತು ಈ ಪೈಕಿ ಏಳು ಸಾವುಗಳು ಕಳೆದ ಎರಡು ದಿನಗಳ ಅವಧಿಯಲ್ಲಿ ಸಂಭವಿಸಿವೆ.
ರಾಜ್ಯ ನಡೆಸುವ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ ಅಜಯ್ ಶುಕ್ಲಾ ಅವರು ಹೀಟ್ಸ್ಟ್ರೋಕ್ ಪ್ರಕರಣಗಳಲ್ಲಿ ಮರಣ ಪ್ರಮಾಣವು ಸುಮಾರು 60-70ರಷ್ಟು ಹೆಚ್ಚಾಗಿದೆ ಎಂದು ಎಚ್ಚರಿಸಿದ್ದಾರೆ. ರೋಗಿಯನ್ನು ತಡವಾಗಿ ಆಸ್ಪತ್ರೆಗೆ ಕರೆತಂದರೆ, ಒಂದರ ನಂತರ ಒಂದು ಅಂಗವು ವಿಫಲಗೊಳ್ಳಲು ಪ್ರಾರಂಭಿಸುತ್ತದೆ. ಜನರಿಹೆ ಅರಿವಿನ ಕೊರತೆ ಇದೆ. ಈ ರೋಗಿಗಳಲ್ಲಿ ಬಹಳಷ್ಟು ಮಂದಿ ವಲಸೆ ಕಾರ್ಮಿಕರು. ಅಲ್ಲದೆ, ಹೀಟ್ ಸ್ಟ್ರೋಕ್ ಸುಲಭವಾಗಿ ತಪ್ಪಿಸಿಕೊಳ್ಳಬಹುದು ಅಥವಾ ರೋಗಲಕ್ಷಣಗಳನ್ನು ತಪ್ಪಾಗಿ ಗ್ರಹಿಸಬಹುದು. ಬೇರೆ ಯಾವುದೋ ರೋಗಿಗಳು ಮೂರ್ಛೆ ಹೋದಾಗ ಮಾತ್ರ ಅವರ ಸಂಬಂಧಿಕರು ಆಸ್ಪತ್ರೆಗೆ ಸೇರಿಸುವ ಅಗತ್ಯವಿದೆ ಎಂದು ಭಾವಿಸುತ್ತಾರೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರವು ತಮ್ಮ ಮಾರ್ಗಸೂಚಿಗಳಲ್ಲಿ ವಿಶೇಷವಾಗಿ ಮಧ್ಯಾಹ್ನ ಮತ್ತು 3 ಗಂಟೆಯ ನಡುವೆ ಬಿಸಿಲಿನಲ್ಲಿ ಹೋಗದಂತೆ ಜನರಿಗೆ ಸಲಹೆ ನೀಡಿದೆ. ಬಾಯಾರಿಕೆ ಇಲ್ಲದಿದ್ದರೂ ಜನರು ಸಾಧ್ಯವಾದಷ್ಟು ಹೆಚ್ಚಾಗಿ ನೀರು ಕುಡಿಯಬೇಕು ಮತ್ತು ಪ್ರಯಾಣಿಸುವಾಗ ನೀರನ್ನು ತಮ್ಮೊಂದಿಗೆ ಕೊಂಡೊಯ್ಯಬೇಕು ಎಂದು ಸೂಚಿಸಿದೆ. ದೇಹವನ್ನು ನಿರ್ಜಲೀಕರಣಗೊಳಿಸುವ ಆಲ್ಕೋಹಾಲ್, ಟೀ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತ್ಯಜಿಸಬೇಕು ಒಆರ್ಎಸ್ ಮತ್ತು ಮನೆಯಲ್ಲಿ ತಯಾರಿಸಿದ ಪಾನೀಯಗಳಾದ ಲಸ್ಸಿ, ಗಂಜಿ ತಿಳಿ, ನಿಂಬೆ ನೀರು ಮತ್ತು ಮಜ್ಜಿಗೆಯನ್ನು ಸೇವಿಸಬೇಕು ಎಂದು ಅದು ಹೇಳಿದೆ. ಜನರು ತಿಳಿ ಬಣ್ಣದ ಸಡಿಲವಾದ, ಗಾಳಿಯಾಡುವಂಥಾ ಹತ್ತಿ ಬಟ್ಟೆಗಳನ್ನು ಧರಿಸಬೇಕು. ಹೊರಗಡೆ ಹೋಗುವಾಗ ಕನ್ನಡಕ ಮತ್ತು ಛತ್ರಿ ಬಳಸಬೇಕು ಎಂದು ಪ್ರಾಧಿಕಾರ ಹೇಳಿದೆ. ಆಗಾಗ ತಣ್ಣೀರಿನಲ್ಲಿ ಸ್ನಾನ ಮಾಡುವಂತೆಯೂ ಸಲಹೆ ನೀಡಿದೆ.
ದೆಹಲಿಯ ನಿವಾಸಿಗಳು ಸುಮಾರು ಒಂದು ತಿಂಗಳಿನಿಂದ ನಿರಂತರವಾಗಿ ಶಾಖದ ಅಲೆಯಲ್ಲಿ ತತ್ತರಿಸಿದ್ದಾರೆ. ನಗರದಲ್ಲಿನ ಕನಿಷ್ಠ ತಾಪಮಾನವು 35 ಡಿಗ್ರಿ ಸೆಲ್ಶಿಯಸ್ ಅನ್ನು ದಾಟಿದೆ. ಇಲ್ಲಿ ಗರಿಷ್ಠ ತಾಪಮಾನವು 45 ಡಿಗ್ರಿ ಆಗಿದೆ. ನಲ್ಲಿ ನೀರು ದಿನವಿಡೀ ಬಿಸಿಯಾಗಿರುತ್ತದೆ ಮತ್ತು ಹವಾನಿಯಂತ್ರಣಗಳು ಕೂಲಿಂಗ್ ನೀಡದ ಪರಿಸ್ಥಿತಿಯಲ್ಲಿದೆ.
ಮುಂದಿನ 24 ಗಂಟೆಗಳ ಕಾಲ ಉತ್ತರ ಭಾರತದ ಬಹುತೇಕ ಭಾಗಗಳಲ್ಲಿ ಶಾಖದ ಅಲೆಗಳು ಮುಂದುವರಿಯುವ ಸಾಧ್ಯತೆಯಿದೆ ಮತ್ತು ಅದರ ನಂತರ ಕಡಿಮೆಯಾಗುತ್ತದೆ ಎಂದು ಹವಾಮಾನ ಕಚೇರಿ ತನ್ನ ಮುನ್ಸೂಚನೆಯಲ್ಲಿ ತಿಳಿಸಿದೆ.