ಬೆಂಗಳೂರು: ಚೈತ್ರಾ ಕುಂದಾಪುರ ಗ್ಯಾಂಗ್ನಿಂದ ಉದ್ಯಮಿಗೆ 5 ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿ 9 ಆರೋಪಿಗಳ ವಿರುದ್ಧ ಸಿಸಿಬಿ ಚಾರ್ಜ್ಶೀಟ್ ಸಲ್ಲಿಸಿದೆ. 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಸಿದೆ. 75 ಮಂದಿ ಸಾಕ್ಷಿಗಳ ಹೇಳಿಕೆ ದಾಖಲಿಸಿ ಸುಮಾರು 800 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದೆ.
ಮಂಡಿ ನೋವು, ಸಂದಿ ನೋವುಗಳಿಂದ ಜೀವನದಲ್ಲಿ ಬೇಸತ್ತಿದ್ದರೆ ಇದೊಂದು ಚಿಕಿತ್ಸೆ ಪ್ರಯತ್ನ ಮಾಡಿ: ಉಚಿತ ಸಲಹೆ
ಉಡುಪಿ ಜಿಲ್ಲೆ ಬೈಂದೂರಿನ ಉದ್ಯಮಿ ಹಾಗೂ ಸಮಾಜ ಸೇವಕ ಗೋವಿಂದ ಬಾಬು ಪೂಜಾರಿ ಅವರಿಗೆ ಚೈತ್ರಾ ಕುಂದಾಪುರ ಮೋಸ ಮಾಡಿದ್ದಾರಂತೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸ್ತೇನೆ ಅಂತಾ ಚೈತ್ರಾ ಕುಂದಾಪುರ ನಂಬಿಸಿದ್ದರಂತೆ. ಟಿಕೆಟ್ ಆಮಿಷ ಒಡ್ಡಿ 7 ಕೋಟಿ ರೂಪಾಯಿ ಹಣವನ್ನು ವಸೂಲಿ ಮಾಡಿದ್ರಂತೆ. ಇದು ಚೈತ್ರಾ ಕುಂದಾಪುರ ಹಾಗೂ ಅವರ ಸಂಗಡಿಗರ ವಿರುದ್ಧ ಕೇಳಿ ಬಂದಿರೋ ಆರೋಪ. ಈ ಆರೋಪದ ಮೇಲೆ ಬೆಂಗಳೂರಿನ ಸಿಸಿಬಿ ಪೊಲೀಸರು ಚೈತ್ರಾ ಕುಂದಾಪುರ ಅವರನ್ನ ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ. ಚೈತ್ರಾ ಕುಂದಾಪುರ ಸೇರಿದಂತೆ ಒಟ್ಟು 8 ಮಂದಿ ವಿರುದ್ಧ ಬೆಂಗಳೂರಿನ ಬಂಡೇಪಾಳ್ಯ ಪೊಲೀಸ್ ಠಾಣೆಯಲ್ಲಿ ಗೋವಿಂದ ಬಾಬು ದೂರು ನೀಡಿದ್ದರು. ಈ ದೂರಿನ ತನಿಖೆಯನ್ನ ಬೆಂಗಳೂರಿನ ಸಿಸಿಬಿ ಪೊಲೀಸರು ನಡೆಸ್ತಿದ್ರು. ತಮ್ಮ ಮೇಲೆ ದೂರು ದಾಖಲಾದ ದಿನದಿಂದಲೇ ಚೈತ್ರಾ ಕುಂದಾಪುರ ತಲೆಮರೆಸಿಕೊಂಡಿದ್ದರು.
ಉಡುಪಿಯ ಕೃಷ್ಣ ಮಠದ ಬಳಿ ಸಿಸಿಬಿ ಪೊಲೀಸರಿಗೆ ಚೈತ್ರಾ ಕುಂದಾಪುರ ಸಿಕ್ಕಿಬಿದ್ದಿದ್ದಾರೆ. ಇವರ ಸಂಗಡಿಗರಾದ ಪ್ರಸಾದ್, ಗಗನ್ ಕಡೂರು, ಪ್ರಜ್ವಲ್ ಶೆಟ್ಟಿ, ಆರ್. ಎಸ್. ಧನರಾಜ್, ರಮೇಶ್ ಹಾಗೂ ಶ್ರೀಕಾಂತ್ ಕೂಡಾ ಪೊಲೀಸರ ಅತಿಥಿಯಾಗಿದ್ದಾರೆ.
ಚೈತ್ರಾ ಮತ್ತವರ ಗ್ಯಾಂಗ್ ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ಹಾಗೂ ಆರ್ಎಸ್ಎಸ್ ನಾಯಕರ ಹೆಸರಲ್ಲಿ ಮೋಸ ಮಾಡಿದ್ದಾರಂತೆ. ಬಿಜೆಪಿ ಹಾಗೂ ಆರ್ಎಸ್ಎಸ್ ಹೆಸರಲ್ಲಿ ನಕಲಿ ನಾಯಕರನ್ನ ಸೃಷ್ಟಿ ಮಾಡಿ ಇವರು ವಂಚನೆ ಮಾಡಿದ್ದರು ಅನ್ನೋ ಮಾಹಿತಿ ಸಿಗ್ತಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಸಿಬಿ ಪೊಲೀಸರ ವಿಚಾರಣೆ ನಂತರ ಇನ್ನಷ್ಟು ಮಾಹಿತಿ ಸಿಗಬಹುದು.