ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಿಲುಕಿದ್ದು, ಜೈಲಿನಲ್ಲಿ ಕಂಬಿ ಎಣಿಸುತ್ತಿದ್ದಾರೆ. ನಟ ದರ್ಶನ್ ಅವರ ಬಂಧನ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಮಾತ್ರವಲ್ಲದೇ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
T20 World Cup 2024: ಅಮೆರಿಕ ವಿರುದ್ಧದ ಪಂದ್ಯದಲ್ಲಿ ವಿಶೇಷ ದಾಖಲೆ ಬರೆದ ಅರ್ಷದೀಪ್..!
ರೇಣುಕಾಸ್ವಾಮಿ ಎಂಬಾತ ತನ್ನ ಗೆಳತಿ ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಹಾಗೂ ಅಶ್ಲೀಲ ಫೋಟೋ ಕಳುಹಿಸಿದ್ದ ಎಂಬ ಕಾರಣಕ್ಕೆ ಕೊಲೆ ನಡೆದಿದೆ ಎಂಬ ಮಾತುಗಳು ಕೇಳಿ ಬರುತ್ತಿದೆ. ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಮಹತ್ವದ ಸಾಕ್ಷ್ಯಾಧಾರಗಳನ್ನು ಕಲೆ ಹಾಕಿದ್ದು, ಕೃತ್ಯಕ್ಕೆ ಬಳಸಿದ್ದಾರೆ ಎನ್ನಲಾದ ಕಾರುಗಳನ್ನು ಸೀಜ್ ಮಾಡಿದ್ದಾರೆ.
ಪ್ರಕರಣದಲ್ಲಿ ಮೃತದೇಹ ಪತ್ತೆಯಾಗುತ್ತಿದ್ದಂತೆ ಮೂವರು ಪೊಲೀಸರಿಗೆ ಶರಣಾಗಿದ್ದರು. ಆ ಬಳಿಕ ಶರಣಾಗಿದ್ದ ಆರೋಪಿಗಳ ವಿಚಾರಣೆ ನಡೆಸಿದ ವೇಳೆ ಮತ್ತಷ್ಟು ಮಂದಿ ಪ್ರಕರಣದಲ್ಲಿ ಭಾಗಿಯಾಗಿರುವುದು ಪೊಲೀಸರಿಗೆ ತಿಳಿದು ಬಂದಿತ್ತು. ಅಲ್ಲದೇ ನಟ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಅವರ ಹೆಸರು ಕೂಡ ಕೇಳಿ ಬಂದ ಹಿನ್ನೆಲೆಯಲ್ಲಿ ಪ್ರಮುಖ ಸಾಕ್ಷಿಗಳು ಲಭ್ಯವಾಗುತ್ತಿದ್ದಂತೆ ದರ್ಶನ್ ಅವರನ್ನು ಬಂಧನ ಮಾಡಿದ್ದರು. ಸದ್ಯ ಪ್ರಕರಣದಲ್ಲಿ ಬಂಧನ ಮಾಡಿರುವವರ ಸಂಖ್ಯೆ 17ಕ್ಕೆ ಹೆಚ್ಚಳವಾಗಿದೆ ಎನ್ನಲಾಗಿದೆ.
ಇದೇ ವೇಳೆ ಈ ಪ್ರಕರಣ ಪ್ರೋಪೈಲ್ ಆಗಿರುವುದರಿಂದ ಪೊಲೀಸರ ತನಿಖೆ ಸಾಕಷ್ಟು ಕುತೂಹಲ ಮೂಡಿಸಿದೆ. ಅಲ್ಲದೇ ಪ್ರಕರಣದಲ್ಲಿ ದರ್ಶನ್ ಅವರ ಕೈಗಳು ದಿನದಿಂದ ದಿನಕ್ಕೆ ಬೀಗಿಯಾಗುತ್ತಿದ್ದು, ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡ್ತಾರಾ? ಸಲ್ಲಿಕೆ ಮಾಡಿದರೆ ಸುಲಭವಾಗಿ ಜಾಮೀನು ಸಿಗುತ್ತಾ? ಎಂಬ ಪ್ರಶ್ನೆಗಳು ಹಲವರನ್ನು ಕಾಡುತ್ತಿದೆ.
ಪ್ರಕರಣದಲ್ಲಿ ಈಗಾಗಲೇ ಹಿರಿಯ ಪೊಲೀಸರು ವಿಚಾರಣೆಯಲ್ಲಿ ತೊಡಿಸಿಕೊಂಡಿದ್ದಾರೆ. ಇಂತಹ ಕೇಸ್ ಗಳಲ್ಲಿ ಪೊಲೀಸರ ಮೇಲೆ ಪ್ರಭಾವಗಳು ಕೂಡ ಬರೋದಿಲ್ಲ. ಪ್ರಕರಣವನ್ನು ಲಾಜಿಕಲ್ ಎಂಡ್ಗೆ ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾರೆ. ಉದ್ದೇಶ ಪೂರ್ವಕವಲ್ಲದ ಕೊಲೆ ಅಂತ ಹೇಳ್ತಿದ್ದಾರೆ. ಆದರೆ ಕಿಡ್ನಾಪ್ ಯಾಕೆ ಮಾಡ್ತಾರೆ? ಏನೋ ಅಚಾನಕ್ ಆಗಿ ಆಯ್ತು ಅಂದರೆ ಕೂಡಲೇ ಆತ ಸತ್ತ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿಬೇಕಿತ್ತು. ಆದರೆ ಇಲ್ಲಿ ಸಾಕ್ಷಿ ನಾಶಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. ಆದ್ದರಿಂದ ಸುಲಭವಾಗಿ ಜಾಮೀನು ಸಿಗೋದಿಲ್ಲ ಹಾಗೂ ಕಠಿಣ ಶಿಕ್ಷೆ ಆಗುವ ಸಾಧ್ಯತೆಗಳು ಇರುತ್ತೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಪ್ರಕರಣದಲ್ಲಿ ಹಲವು ವರ್ಷನ್ಗಳು ಕೂಡ ಬರುತ್ತದೆ. ಇದರಲ್ಲಿ ಸತ್ಯವನ್ನು ಶೋಧ ಮಾಡಬೇಕಿರುವುದು ಪ್ರಕರಣ ತನಿಖಾ ಅಧಿಕಾರಿ. ಕೊಲೆಯಾದ ವ್ಯಕ್ತಿಯನ್ನು ಕರೆತಂದವರು, ಹೊಡೆದು ಹಲ್ಲೆ ಮಾಡಿದವರು ಹಾಗೂ ಕೊಲೆ ಮಾಡಿದವರು ಅಂತ ನಾನಾ ವರ್ಷನ್ಗಳು ಬರುತ್ತವೆ. ಇಲ್ಲಿ ಪ್ರಕರಣದ ತನಿಖಾಧಿಕಾರಿಯೇ ಪ್ರಮುಖ ಪಾತ್ರವಹಿಸುತ್ತಾರೆ ಎಂದು ತಿಳಿಸಿದ್ದಾರೆ