ಚಾಮರಾಜನಗರ:- 7 ವಿಧಾನಸಭಾ ಕ್ಷೇತ್ರಗಳ ಕಾಂಗ್ರೆಸ್ ಪಕ್ಷದ ಶಾಸಕರು ಹಾಗೂ ಒಬ್ಬ ಮಾಜಿ ಶಾಸಕರ ನೆರವಿನಿಂದ ಕಾಂಗ್ರೆಸ್ ಪಕ್ಷದ ಲೋಕಸಭಾ ಸದಸ್ಯರ ಆಯ್ಕೆಯಾಯ್ತು ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್.ಕೃಷ್ಣಮೂರ್ತಿ ಹೇಳಿಕೆ ನೀಡಿದ್ದಾರೆ.
ಚಾಮರಾಜನಗರದ ಪತ್ರಿಕಾಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಚಾಮರಾಜನಗರ ಮೀಸಲು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ 8 ವಿಧಾಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಪಕ್ಷಕ್ಕೆ ಲೀಡ್ ಕೊಟ್ಟಿದೆ. ಹಾಗಾಗಿ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್ ಭರ್ಜರಿ ಗೆಲವು ಸಾಧ್ಯವಾಯ್ತು. ಕಳೆದ ಬಾರಿಗಿಂತ ಹೆಚ್ಚು ಮತ ನೀಡುವ ಮೂಲಕ ಕಾಂಗ್ರೆಸ್ ಭದ್ರಕೋಟೆ ಎಂಬುದು ಸಾಭೀತಾಗಿದೆ.
ಭರ್ಜರಿ ಗೆಲುವು ಸಾಧಿಸಿದಕ್ಕೆ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದರು.