ಚಾಮರಾಜನಗರ:- ಖಾಸಗಿ ಶಾಲಾ ವಾಹನದ ಚಕ್ರ ಹರಿದು ವಿದ್ಯಾರ್ಥಿಯೊರ್ವನ ಬಲಗಾಲು ನಜ್ಜುಗುಜ್ಜಾಗಿರುವ ಘಟನೆ ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.
ಕೋಲ್ಕತ್ತಾ ವೈದ್ಯೆಯ ರೇಪ್ & ಮರ್ಡರ್ ಕೇಸ್: PM ಮೋದಿಗೆ ಪತ್ರ ಬರೆದ ಪದ್ಮಶ್ರೀ ಪುರಸ್ಕೃತ 70 ವೈದ್ಯರು!
ವಾ.ಓ: ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಗೋಪಾಲಪುರ ಗ್ರಾಮದ ಸಿದ್ದಪ್ಪ ಎಂಬುವರ ಮಗ ಹೃತ್ವಿಕ್( 8) ಎಂಬಾತನ ಕಾಲಿಗೆ ತೀವ್ರ ಪೆಟ್ಟಾಗಿದೆ.
ಪೆಟ್ಟಾಗಿರುವ ಬಾಲಕ ಕನ್ನೇಗಾಲ ಗ್ರಾಮದಲ್ಲಿರುವ ವಿದ್ಯಾ ಅಮೃತ ಖಾಸಗಿ ಶಾಲೆಯ ಎರಡನೇ ತರಗತಿ ವಿದ್ಯಾರ್ಥಿಯಾಗಿದ್ದು ಗೋಪಾಲಪುರ ಗ್ರಾಮದಲ್ಲಿ ಶನಿವಾರ ಬೆಳಗಿನ ತರಗತಿಗೆ ತೆರಳಲು ಶಾಲಾ ವಾಹನಕ್ಕಾಗಿ ಕಾಯುತ್ತಾ ಸೇತುವೆ ಮೇಲೆ ಕುಳಿತಿದ್ದ,
ಈ ವೇಳೆ ಸೆಂಟ್ ಜಾನ್ ಖಾಸಗಿ ಶಾಲಾ ವಾಹನದ ಚಾಲಕ ವಾಹನವನ್ನು ರಿವರ್ಸ್ ತೆಗೆಯುತ್ತಿದ್ದ ವೇಳೆ ರಸ್ತೆ ಕಿರಿದಾದ ಕಾರಣ ವಾಹನದ ಹಿಂಬದಿ ಚಕ್ರವು ವಿದ್ಯಾರ್ಥಿಯ ಬಲಗಾಲಿನ ಮೇಲೆ ಹರಿದಿದೆ.
ಈ ಘಟನೆಯಲ್ಲಿ ಬಾಲಕನ ಕಾಲು ನಜ್ಜುಗುಜ್ಜಾಗಿದೆ.
ಕೂಡಲೇ ಸ್ಥಳೀಯರು ಗುಂಡ್ಲುಪೇಟೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ವಿದ್ಯಾರ್ಥಿಯನ್ನು ರವಾನಿಸಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮೈಸೂರಿಗೆ ರವಾನಿಸಿದ್ದಾರೆ.
ಘಟನಾ ಸ್ಥಳಕ್ಕೆ ಸಬ್ ಇನ್ಸ್ ಪೆಕ್ಟರ್ ಸಾಹೇಬಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿ ಶಾಲಾ ವಾಹನವನ್ನು ವಶಕ್ಕೆ ಪಡೆದುಕೊಂಡಿದ್ದು ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.