ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲು ಸೇರಿದ್ದಾರೆ. ದರ್ಶನ್ ಬಿಡುಗಡೆಗೆ ಒಂದು ಕಡೆ ಪತ್ನಿ ವಿಜಯಲಕ್ಷ್ಮಿ ಶತಪ್ರಯತ್ನ ನಡೆಸುತ್ತಿದ್ದರೆ ಇತ್ತ ಸಹೋದರು ದಿನಾಕರ್ ತೂಗುದೀಪ್ ಕೂಡ ಪ್ರಯತ್ನ ಮುಂದುವರೆಸಿದ್ದಾರೆ. ಇದೀಗ ದಿನಕರ್ ತೂಗುದೀಪ್ ದಂಪತಿ ಜೊತೆ ನಟ ಚಿಕ್ಕಣ್ಣ ಕೂಡ ಚಾಮುಂಡಿ ತಾಯಿಯ ದರ್ಶನ ಪಡೆದು ದರ್ಶನ್ ಬಿಡುಗಡೆಗೆ ಪ್ರಾರ್ಥಿಸಿದ್ದಾರೆ.
ಮೈಸೂರಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ದರ್ಶನ್ ಸಹೋದರ ದಿನಕರ್ ತೂಗುದೀಪ್ ಕುಟುಂಬದ ಜೊತೆ ಚಿಕ್ಕಣ್ಣ ಕೂಡ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಅಣ್ಣನನ್ನು ಸಂಕಷ್ಟದಿಂದ ಪಾರು ಮಾಡುವಂತೆ ಪ್ರಾರ್ಥನೆ ಮಾಡಿದ್ದಾರೆ.
ಇನ್ನೂ ಇಂದು (ಜು.26) ಬೆಳಗ್ಗೆ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನದಲ್ಲಿ ವಿಜಯಲಕ್ಷ್ಮಿ ಚಂಡಿಕಾ ಯಾಗ ಮಾಡಿಸಿದ್ದಾರೆ. ದರ್ಶನ್ರನ್ನು ಸಂಕಷ್ಟದಿಂದ ಪಾರಾಗಲಿ ಎಂದು ದೇವಿಗೆ ವಿಜಯಲಕ್ಷ್ಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.