ಬೆಂಗಳೂರು:- ಚನ್ನಪಟ್ಟಣ ಬೈ ಎಲೆಕ್ಷನ್ ಕಾವು ಜೋರಾಗಿದ್ದು, ಮೈತ್ರಿ ಅಭ್ಯರ್ಥಿಯಾಗಿ ಇಂದು ನಿಖಿಲ್ ನಾಮಪತ್ರ ಸಲ್ಲಿಕೆ! ಮಾಡಲಿದ್ದಾರೆ.
ಒಂದು ಗ್ಲಾಸ್ ಬೂದು ಗುಂಬಳಕಾಯಿ ಜ್ಯೂಸ್, ಆರೋಗ್ಯಕ್ಕೆ ಸಿಗುತ್ತೆ ಹಲವು ಬೆನಿಫಿಟ್!
ಚನ್ನಪಟ್ಟಣ ಉಪಚುನಾವಣೆ ಅಖಾಡ ಹೈವೋಲ್ಟೇಜ್ ಪಡೆದುಕೊಂಡಿದೆ. ಬಿಜೆಪಿ ತೊರೆದು ಕಾಂಗ್ರೆಸ್ನಿಂದ ಕಣಕ್ಕಿಳಿದಿರುವ ಸೈನಿಕನ ವಿರುದ್ಧ ಬಿಜೆಪಿ ಜೆಡಿಎಸ್ ದೋಸ್ತಿ ಪಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕೆ ಇಳಿಸಿದೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ ವಿರುದ್ಧ ನಿಖಿಲ್ ಎದುರಾಳಿಯಾಗಿ ಕಣಕ್ಕಿಳಿಯುತ್ತಿದ್ದಾರೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸುಮಲತಾ ಅಂಬರೀಶ್ ಅವರ ವಿರುದ್ಧ ಸ್ಪರ್ಧಿಸಿದ ಚುನಾವಣೆ ಅಂತೆಯೇ ಚನ್ನಪಟ್ಟಣ ಉಪಚುನಾವಣೆ ಕೂಡ ಹೈವೋಲ್ಟೇಜ್ ಕದನವಾಗಿ ಮಾರ್ಪಟ್ಟಿದೆ.
ಚನ್ನಪಟ್ಟಣ ಉಪಚುನಾವಣೆ ರಾಜಕೀಯದಲ್ಲಿ ಎಲ್ಲವೂ ನಿರೀಕ್ಷೆಯಂತೆ ನಡೆದಿದೆ. ಸಾಕಷ್ಟು ಹೈಡ್ರಾಮಾ, ಬಿಡುವಿಲ್ಲದ ರಾಜಕೀಯ ಚಟುವಟಿಕೆಗಳ ನಡುವೆ ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಆಯ್ಕೆಯಾಗಿದ್ದಾರೆ. ಅಲ್ಲಿಗೆ ಚನ್ನಪಟ್ಟಣದಲ್ಲಿ ಯೋಗೇಶ್ವರ್-ನಿಖಿಲ್ ಕುಮಾರಸ್ವಾಮಿ ನಡ್ವೆ ನೇರಾನೇರ ಸ್ಟಾರ್ವಾರ್ ನಡೆಯಲಿದೆ.
ಇದೇ ವೇಳೆ 3ನೇ ಪ್ರಯತ್ನದಲ್ಲಿ ಚುನಾವಣಾ ಚಕ್ರವ್ಯೂಹ ಬೇಧಿಸುವ ಮಾತುಗಳನ್ನು ನಿಖಿಲ್ ಕುಮಾರಸ್ವಾಮಿ ಆಡಿದ್ರು. ಆದ್ರೆ, ನಿಖಿಲ್ ಸ್ಪರ್ಧೆ ನಮಗೆ ಮೊದಲೇ ಗೊತ್ತಿತ್ತು ಎಂದು ಸಿಎಂ ಹೇಳಿದ್ದಾರೆ. ಇಂದು ಬಿಜೆಪಿ-ಜೆಡಿಎಸ್ ನಾಯಕರ ಜೊತೆಗೂಡಿ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.