ಹುಬ್ಬಳ್ಳಿ:- ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಿಪಿ ಯೋಗೇಶ್ವರ್ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಚನ್ನಪಟ್ಟಣ ಉಪಚುನಾವಣೆ ಟಿಕೆಟ್ ಸಂಬಂಧ ಜೆಡಿಎಸ್ ಬಿಜೆಪಿಯಲ್ಲಿ ಬಿರುಕು ಕಾಣಿಸಿಕೊಂಡ ಹಿನ್ನೆಲೆ, ಹುಬ್ಬಳ್ಳಿಗೆ ತೆರಳಿ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ನೀಡಿದ್ದಾರೆ.
Job ಕಳೆದುಕೊಂಡ ಯುವಕನಿಂದ ಆತ್ಮಹತ್ಯೆಗೆ ಯತ್ನ: ಸ್ಥಳೀಯ ನಿವಾಸಿಗಳಿಂದ ರಕ್ಷಣೆ!
ಸಿಪಿ ಯೋಗೇಶ್ವರ್ ಅವರು ವಿಧಾನ ಪರಿಷತ್ನ ನಾಮನಿರ್ದೇಶಿತ ಬಿಜೆಪಿ ಸದಸ್ಯರಾಗಿದ್ದು, ಈ ಬಾರಿ ಚನ್ನಪಟ್ಟಣ ಉಪಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದ್ರೆ, ಜೆಡಿಎಸ್ ಕ್ಷೇತ್ರವನ್ನು ಬಿಟ್ಟುಕೊಡದಿರಲು ನಿರ್ಧರಿಸಿದೆ. ಅಲ್ಲದೇ ಹೈಕಮಾಂಡ್ ಸಹ ಜೆಡಿಎಸ್ ಕ್ಷೇತ್ರವಾಗಿದ್ದರಿಂದ ಅವರಿಗೆ ಬಿಟ್ಟುಕೊಟ್ಟಿದೆ. ಇನ್ನು ಜೆಡಿಎಸ್ ಚಿಹ್ನೆಯಿಂದ ಸ್ಪರ್ಧೆ ಮಾಡುವಂತೆ ಕುಮಾರಸ್ವಾಮಿ ಸಹ ಸಿಪಿ ಯೋಗೇಶ್ವರ್ಗೆ ಆಫರ್ ನೀಡಿದ್ದರು. ಆದ್ರೆ, ಸಿಪಿ ಯೋಗೇಶ್ವರ್ ಜೆಡಿಎಸ್ನಿಂದ ಸ್ಪರ್ಧಿಸಲು ನಿರಾಕರಿಸಿದ್ದು, ಇದೀಗ ಬಿಜೆಪಿಯ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.