ದಾವಣಗೆರೆ:– ಹೆಂಡತಿ ಇದ್ದರೂ ಬೇರೊಬ್ಬಳ ಜೊತೆ ಚಕ್ಕಂದ ಆಡುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್ ಅನ್ನು ಸಸ್ಪೆಂಡ್ ಮಾಡಲಾಗಿದೆ.
Mandya: ರಾಜ್ಯದ 25 ಜಿಲ್ಲೆಗಳಲ್ಲಿ ವಾಡಿಕೆಕ್ಕಿಂತ ಹೆಚ್ಚು ಮಳೆ; ಕೃಷ್ಣ ಬೈರೇಗೌಡ
ಹೊನ್ನಾಳಿ ಪೊಲೀಸ್ ಠಾಣೆಯ ಸಿಪಿಸಿ 124 ನಂಬರ್ ಪ್ರಸನ್ ಟಿ. ಅಮಾನತ್ತು ಆದ ಪೇದೆ. ಪತ್ನಿಯಿಂದ ದೂರುಪಡೆದು ನಂತರ ಹಿರಿಯ ಅಧಿಕಾರಿಗಳಿಂದ ತನಿಖೆ ಮಾಡಿಸಿ ಆರೋಪ ಸತ್ಯವೆಂದು ಗೊತ್ತಾದ ಬಳಿಕ ಎಸ್ಪಿ ಉಮಾ ಪ್ರಶಾಂತ್ ಅಮಾನತ್ತುಗೊಳಿಸಿದ್ದಾರೆ.
ಪರಸ್ತ್ರೀ ಸಂಘ ಮಾಡಿ ಕೆಲ ತಿಂಗಳಿಂದ ಮನೆಗೆ ಬರುವುದನ್ನೇ ಪೇದೆ ಪ್ರಸನ್ ನಿಲ್ಲಿಸಿದ್ದ. ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನ ಕಟ್ಟಿಕೊಂಡು ಕುಟುಂಬ ನಡೆಸಲು ಪ್ರಸನ್ನ ಅವರ ಪತ್ನಿ ಪರದಾಡುತ್ತಿದ್ದರು. ಈ ಮಧ್ಯೆ ಮತ್ತೊಬ್ಬಳೊಂದಿಗೆ ರಂಗಿನಾಟ ಪ್ರಶ್ನೆ ಮಾಡಿದಕ್ಕೆ ಪತ್ನಿಯ ತಲೆಗೆ ಕಬ್ಬಿಣದ ವಸ್ತುವಿನಿಂದ ಹೊಡೆದು ಹಲ್ಲೆಮಾಡಿದ್ದ. ಆತನ ದೌರ್ಜನ್ಯದಿಂದ ಬೇಸತ್ತು ಪತ್ನಿ ದೂರು ನೀಡಿದ್ದರು. ಈ ಹಿನ್ನಲೆ ಹಿರಿಯ ಅಧಿಕಾರಿಗಳಿಂದ ಎಸ್ಪಿ ತನಿಖೆ ಮಾಡಿಸಿದ್ದರು.