ಬೆಂಗಳೂರು: ಕಾಂಗ್ರೆಸ್ ಸರ್ಕಾರ ತಾಲಿಬಾನ್ ಸರ್ಕಾರವಾಗಿ ಬದಲಾಗಿದ್ದು, ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ. ಇದರ ವಿರುದ್ಧ ಬಿಜೆಪಿ ಹೋರಾಟ ನಡೆಸಿ ಬುದ್ಧಿ ಕಲಿಸಲಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಎಚ್ಚರಿಕೆ ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಟಿಪ್ಪು ದೆವ್ವ ಹಿಡಿದಿದೆ.
ಇದಕ್ಕಾಗಿಯೇ ಮಂಗಳೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆಯಾದರೂ ಕಾಂಗ್ರೆಸ್ ಸರ್ಕಾರ, ಕಾರ್ಯಕರ್ತರ ವಿರುದ್ಧವೇ ಪ್ರಕರಣ ದಾಖಲಿಸಿದೆ. ಪಾಕಿಸ್ತಾನದ ಕುನ್ನಿಗಳು ಎಂದು ಹೇಳಿದ್ದಾಗಿ ಪೊಲೀಸರು ಹೇಳಿದ್ದಾರೆ. ಆದರೆ ಇದಕ್ಕೆ ಯಾವುದೇ ದಾಖಲೆ ಇಲ್ಲ. ಬಿಜೆಪಿ ಕಾರ್ಯಕರ್ತರು ಭಾರತ್ ಮಾತಾ ಕೀ ಜೈ ಎಂದಿದ್ದರು.
Bananas For Diabetics: ಸಕ್ಕರೆ ಕಾಯಿಲೆ ಇರುವವರು ಬಾಳೆಹಣ್ಣು ತಿನ್ನಬಹುದಾ? ಇಲ್ಲಿದೆ ನೋಡಿ ಉತ್ತರ
ಆದರೂ ಮುಸ್ಲಿಮರನ್ನು ರಕ್ಷಣೆ ಮಾಡಿ ಹಿಂದೂಗಳಿಗೆ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಜನರು ಬುದ್ಧಿ ಕಲಿಸಿದ್ದಾರೆ. ಅದೇ ರೀತಿ ಮತ್ತೆ ಬುದ್ಧಿ ಕಲಿಸಲು ಬಿಜೆಪಿಯಿಂದ ದೊಡ್ಡ ಹೋರಾಟ ಮಾಡಲಾಗುವುದು. ಮತಕ್ಕಾಗಿ ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲಾಗುತ್ತಿದೆ ಎಂದು ದೂರಿದರು.