ಬೆಂಗಳೂರು: ಮಗನ ಸೋಲಿನ ಬೇಸರಲ್ಲಿದ್ದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಳಿ ಸಿಎಂ ಸಿದ್ದರಾಮಯ್ಯ ಕ್ಷಮೆ ಕೇಳಿದ್ದಾರೆ. ಸಿಎಂ ಭೇಟಿಗೆ ಆಗಮಿಸಿದ್ದ ಬೆಳಗಾವಿ ಭಾಗದ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ಮತ್ತು ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಆಗಮಿಸಿದ್ದರು.
ಲಕ್ಷ್ಮಿ ಹೆಬ್ಬಾಳ್ಕರ್ ನೋಡಿ ಸಿಎಂ ಸಿದ್ದರಾಮಯ್ಯ ಸಾರಿ ಕಣಮ್ಮ ಎಂದಿದ್ದಾರೆ. ಸಿಎಂ ಸ್ವಾರಿ ಎಂದ ಕೂಡಲೇ ತುಂಬಾ ಭಾವುಕರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮೌನಕ್ಕೆ ಶರಣಾದರು. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಅವರು 1,78,437 ಮತಗಳ ಅಂತರದಿಂದ ಸೋತಿದ್ದಾರೆ. ಬಿಜೆಪಿಯ ಜಗದೀಶ್ ಶೆಟ್ಟರ್ ಅವರಿಗೆ 7,62,029 ಮತಗಳು ಬಿದ್ದರೆ ಮೃಣಾಲ್ ಅವರಿಗೆ 5,83,592 ಮತಗಳು ಬಿದ್ದಿದ್ದವು.