ಮೈಸೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅರ್ಜಿ ವಜಾಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು ಎಂದು ವಿಧಾನ ಪರಿಷತ್ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಹೇಳಿದ್ದಾರೆ. ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಈ ದೇಶದ ಕಾನೂನು ಎಷ್ಟು ಗಟ್ಟಿಯಾಗಿದೆ ಅನೋದು ಕೋರ್ಟ್ ಇಂದಿನ ಆದೇಶದಿಂದ ಖಾತ್ರಿಯಾಗಿದೆ.
ಉಪ್ಪು ತಿಂದವರು ನೀರು ಕುಡಿಯಲೇಬೇಕು ಅನ್ನೋದು ಸಹ ಇದರಿಂದ ಜನ ಅರ್ಥಮಾಡಿ ಕೊಂಡಿದ್ದಾರೆ. ಈ ದೇಶದ ಕಾನೂನನ್ನು ಧಿಕ್ಕರಿಸಿ ಮಾಡುವ ಯಾವುದೇ ಪ್ರಯತ್ನಗಳು ಸಹ ಸಾಂದರ್ಭಿಕವಾಗಿ ತತಕ್ಷಣಕ್ಕೆ ಅವರಿಗೆ ಒಳ್ಳೆಯದಾಗಬಹುದು. ಆದ್ರೆ ದೀರ್ಘಕಾಲವಾಗಿ ಇರಲ್ಲ. ಕಾನೂನನ್ನು ಮುರಿಯುವವರಿಗೆ, ವಿರೋಧಿಸುವವರಿಗೆ ನ್ಯಾಯ ಸಿಗ್ಲಲ ಅನ್ನೋದನ್ನ ಹೈಕೋರ್ಟ್ ಆದೇಶ ಎತ್ತಿಹಿಡಿದಿದೆ ಎಂದು ಹೇಳಿದರು.
Pooja Room: ದೇವರ ಮನೆಯಲ್ಲಿ ಯಾವುದೇ ಕಾರಣಕ್ಕೂ ಈ ಮೂರ್ತಿಯನ್ನು ಇಡಬೇಡಿ!
ಸಿಎಂ ಕುಟುಂಬವೇ ಇಂತಹ ಅವ್ಯವಹಾರದಲ್ಲಿ ತೊಡಗಿರುವುದು ಇದೇ ಮೊದಲು. ಸಿದ್ದರಾಮಯ್ಯ ಅವರು 2 ಬಾರಿ ಡಿಸಿಎಂ ಆಗಿದ್ದವರು, ವಿಪಕ್ಷ ನಾಯಕರಾಗಿದ್ದವರು. 2ನೇ ಬಾರಿಗೆ ಮುಖ್ಯಮಂತ್ರಿ ಸಹ ಆಗಿದ್ದಾರೆ. ಅವರು ತಮ್ಮದೇ ಅಲ್ಲದ ಮುಡಾದ ಭೂಮಿಗೆ ಪರಿಹಾರ ಕೇಳಿದ್ದು ತಪ್ಪು, ಇದರ ವಿರುದ್ಧ ಬೆಂಗಳೂರಿನ ಮೈಸೂರಿನ ವರೆಗೆ ಬಿಜೆಪಿ ದೊಡ್ಡ ಹೋರಾಟ ಬಯಲಿಗೆಳೆಯುವ ಕೆಲಸ ಮಾಡಿದೆ ಎಂದು ಶ್ಲಾಘಿಸಿದರು.