ಗಂಗಾವತಿ: ಈ ಲೋಕಸಭಾ ಚುನಾವಣೆ ಬಳಿಕ ಸಿಎಂ ಸಿದ್ದರಾಮಯ್ಯ ಕುರ್ಚಿ ಉರುಳಲಿದೆ ಎಂದು ಶಾಸಕ ಜಿ. ಜನಾರ್ದನರೆಡ್ಡಿ ಭವಿಷ್ಯ ನುಡಿದರು. ಬಿಜೆಪಿ ಅಭ್ಯರ್ಥಿ ಡಾ ಬಸವರಾಜ್ ಕ್ಯಾವಟರ್ ಪರ ಚುನಾವಣಾ ಪ್ರಚಾರದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಸಿಎಂ ಸ್ಥಾನದಲ್ಲಿ ಮುಂದುವರಿಯ ಬೇಕಾದ್ರೆ ಮೈಸೂರಿನಲ್ಲಿ 60 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಎಂದು ಸ್ವತಃ ಸಿಎಂ ಸಿದ್ದರಾಮಯ್ಯ ಹೇಳುತ್ತಿದ್ದಾರೆ.
ಸಾರ್ವಜನಿಕ ವೇದಿಕೆಯಲ್ಲಿ ಡಿ ಕೆ ಶಿವಕುಮಾರ್ ಅವರು ಸಿಎಂ ಆಗುವ ಕನಸಿನ ಇಂಗಿತ ವ್ಯಕ್ತಪಡಿ ಸುತ್ತಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಇತ್ತೀಚೆಗೆ ನಡೆದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರು ಡಿಕೆಶಿಯನ್ನು ಸಿಎಂ ಎಂದು ಸಂಬೋಧಿಸಿದ್ದಾರೆ. ಇದೆಲ್ಲವನ್ನೂ ಗಮನಿಸಿದರೆ ಕುರ್ಚಿಗಾಗಿ ಇಬ್ಬರ ನಡುವೆ ಸ್ವತಃ ಹೈಕಮಾಂಡ್ ಜಗಳ ಹಚ್ಚಿದಂತೆ ಕಾಣುತ್ತಿದೆ ಎಂದು ವ್ಯಂಗ್ಯವಾಡಿದರು. ಡಿ ಕೆ ಶಿವಕುಮಾರ್ ಅವರು ಸಿಎಂ ಗಾದಿಯ ಮೇಲೆ ಕಣ್ಣಿಟ್ಟುಕೊಂಡು ಕುಳಿತಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
Small Saving: ಈ ಯೋಜನೆಯಲ್ಲಿ 417ರೂ. ಹೂಡಿಕೆ ಮಾಡಿದ್ರೆ ಮಿಲೇನಿಯರ್ ಆಗಬಹುದು..! ಹೇಗೆ ಗೊತ್ತಾ..?
ಲೋಕಸಭಾ ಚುನಾವಣೆಗೂ ರಾಜ್ಯದ ಸಿಎಂ ಸ್ಥಾನಕ್ಕೂ ಏನು ಸಂಬಂಧ ಎಂಬುದಕ್ಕೆ ರೆಡ್ಡಿ ಪ್ರತಿಕ್ರಿಯಿಸಿ, ಜೂನ್ 4ರ ಬಳಿಕ ಲೋಕಸಭೆಯ ಫಲಿತಾಂಶ ಬಂದ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಿದ್ದು ಹೋಗುತ್ತದೆ ಎಂಬ ಮಾತನ್ನು ಬಿಜೆಪಿ ನಾಯಕರು ಹೇಳುತ್ತಿಲ್ಲ. ಬದಲಿಗೆ ಕಾಂಗ್ರೆಸ್ ಪಕ್ಷದವರೇ ಹೇಳಿಕೊಂಡು ಓಡಾಡುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ಜನರ ಜಾತಿ, ಧರ್ಮದ ಮಧ್ಯೆ ಜಗಳ ಹಚ್ಚುವ ಕೆಲಸ ಮಾಡಿ ಅಧಿಕಾರಕ್ಕೆ ಬರುತ್ತದೆ. ಆದರೆ ಬಿಜೆಪಿ ಅಭಿವೃದ್ಧಿ ಮೂಲಕ ಅಧಿಕಾರಕ್ಕೆ ಬರುತ್ತದೆ ಎಂದು ತಿಳಿಸಿದರು.
![](https://ainlivenews.com/wp-content/uploads/2024/01/Ad-Banner-copy-scaled.jpg)