ಅಥಣಿ : ಅಖಂಡ ಬೆಳಗಾವಿ ಜಿಲ್ಲೆಯಲ್ಲಿ ಕೊನೆಯ ತಾಲೂಕು ಅಥಣಿ, ಆಡಳಿತವನ್ನು ಇನ್ನಷ್ಟು ಜನರ ಸಮೀಪ ತರುವುದಕ್ಕೆ ಅಥಣಿ ಜಿಲ್ಲೆ ಆಗಬೇಕು ಈ ಕುರಿತು ನಾನು ಸದನದಲ್ಲಿ ಸರ್ಕಾರ ಗಮನವನ್ನು ಸೆಳೆಯುತ್ತೆನೆ ಜೊತೆಗೆ ಅಥಣಿ ಸುತ್ತಮುತ್ತಲಿನ ಶಾಸಕರು ಬೆಂಬಲ ಸೂಚಿಸಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿದರು.
ಅವರು ಅಥಣಿ ಜಿಲ್ಲಾ ಹೋರಾಟ ಸಮೀತಿ ವತಿಯಿಂದ ಹಮ್ಮಿಕೊಂಡ ಅಥಣಿ ಬಂದ್ ನಲ್ಲಿ ಭಾಗವಹಿಸಿ ಮಾಧ್ಯಮದವರ ಜೊತೆ ಮಾತನಾಡಿ ಅಥಣಿ ಜಿಲ್ಲಾ ಕೇಂದ್ರಕ್ಕಾಗಿ ಸುತ್ತಮುತ್ತಲಿನ ಶಾಸಕರು ಕೂಡ ಸದನದಲ್ಲಿ ಧ್ವನಿ ಎತ್ತುತ್ತಾರೆ. ಈ ಬಾಗದ ಜನರ ಭಾವನೆಯನ್ನು ಸಿಎಂ ಅವರನ್ನು ಖುದ್ದಾಗಿ ಭೇಟಿ ನೀಡಿ ಈ ಪ್ರಸ್ತಾಪ ಸಲ್ಲಿಸುತ್ತೇನೆ ಎಂದರು.
ಚಿಕ್ಕೋಡಿ ಗೋಕಾಕ್ ಜಿಲ್ಲಾ ರಚನೆಗೆ ಕೂಗು ಬರುತ್ತೆ, ಈ ಮದ್ಯದಲ್ಲಿ ಬೈಲಹೊಂಗಲ ಜಿಲ್ಲಾ ರಚನೆ ಬೇಡಿಕೆ ಬರುತ್ತಿದೆ. ಗಂಡ ಹೆಂಡತಿ ನಡುವೆ ಕೂಸು ಬಡವಾಯಿತು ಎಂಬಂತಾಗಿದೆ ಅಥಣಿ ಜನರ ಸ್ಥಿತಿ ಜಿಲ್ಲಾ ರಚನೆಯಲ್ಲಿ ಯಾವುದೇ ರಾಜಕೀಯ ಹೋರಾಟಗಳು ನಡೆಯುತ್ತಿಲ್ಲ.
ಈ ಬಾಗದ ಜನಪ್ರತಿನಿಧಿಯಾಗಿ ನಾನು ಸರ್ಕಾರ ಗಮನವನ್ನು ಸೆಳೆಯುತ್ತೆನೆ, ಗೋಕಾಕ್ ಚಿಕ್ಕೋಡಿ ಜಿಲ್ಲೆಯಾದರೆ ನನ್ನ ತಕರಾರು ಏನು ಇಲ್ಲಾ.
ಈ ಬಾಗದ ಅಥಣಿ ಜಿಲ್ಲಾ ರಚನೆ ಆಗಬೇಕು ಎಂಬುದು ಇಲ್ಲಿನ ಜನರ ಆಗ್ರಹ ನಾನು ಸರ್ಕಾರಕ್ಕೆ ಈ ವಿಚಾರವನ್ನು ಸಲ್ಲಿಸುತ್ತೇನೆ ಎಂದರು.