ಮಡಿಕೇರಿ:– ಅಧಿಕಾರ ದುರ್ಬಳಕೆ ಮಾಡುವುದಷ್ಟೇ CM ಸಿದ್ದರಾಮಯ್ಯ ಕೆಲಸ ಎಂದು ಮಾಜಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಸಿದ್ದರಾಮಯ್ಯ ಅವರು ಬರೀ ಸೌಂಡ್ ಬಾಕ್ಸ್. ಸೌಂಡ್ ಬಾಕ್ಸ್ ಬರೀ ಅಬ್ಬರ ಮಾಡುತ್ತೆ ಅಷ್ಟೇ. ಆದರೆ ಕೆಲಸ ಮಾಡುವ ಅನುಭವ, ಕಾಳಜಿ ಸಿದ್ದರಾಮಯ್ಯನವರಿಗೆ ಇಲ್ಲ. ಬರೀ ದ್ವೇಷ, ಅಧಿಕಾರ ದುರ್ಬಳಕೆ ಮಾಡುವುದಷ್ಟೇ ಇವರ ಕೆಲಸ. ಈಗ ಲೂಟಿ ಮಾಡಿರುವ ಹಣವನ್ನು ಚುನಾವಣೆಯಲ್ಲಿ ದುರ್ಬಳಕೆ ಮಾಡಲು ಹೊರಟಿದ್ದಾರೆ. ಹಣ ಬಲದ ಮೇಲೆ ಗೆಲ್ಲುತ್ತೇವೆ ಎನ್ನುವ ಹುಚ್ಚು ವಿಶ್ವಾಸದಲ್ಲಿ ಇದ್ದಾರೆ. ಆದರೆ ಸಂಪೂರ್ಣ ಸೋಲುತ್ತಾರೆ ಎಂದರು.
ಇನ್ನೂ ತಡಬೇಡ ವಿಲ್ ಜ್ಯಾಕ್ಸ್ಗೆ ಸ್ಥಾನ ನೀಡಬೇಕು! – ಆರ್ಸಿಬಿಗೆ ಟಾಮ್ ಮೂಡಿ ಸಲಹೆ!
ಕಳೆದ ಬಾರಿ ಒಂದೇ ಒಂದು ಸ್ಥಾನ ಗೆದ್ದಿದ್ದರು. ಆದರೆ ಈ ಬಾರಿ ಅದನ್ನು ಕಳೆದುಕೊಳ್ಳುತ್ತಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಹೃದಯವಂತ ಡಾ. ಮಂಜುನಾಥ್ ಗೆಲ್ಲುತ್ತಾರೆ. ಆ ಮೂಲಕ ಸಿದ್ದರಾಮಯ್ಯ, ಡಿಕೆಶಿ ಟೀಂಗೆ ಬುದ್ಧಿ ಕಲಿಸಲಿದ್ದಾರೆ. ಅಲ್ಲದೇ ವಿಧಾನಸಭಾ ಚುನಾವಣೆ ಕಾಂಗ್ರೆಸ್ ಮುಕ್ತ ದೇಶವಾಗಬೇಕಿತ್ತು. ಕಾಂಗ್ರೆಸ್ ರಾಜ್ಯಕ್ಕೆ ಒಂದು ಶಾಪವಿದ್ದಂತೆ ಎಂದರು.