ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ತಾಲೂಕಿನ ಗೋಪಲ್ಲಿ ಗೇಟ್ ಬಳಿ ಭೀಕರ ಅವಘಡ ಸಂಭವಿಸಿದೆ. ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿದ್ದು, ಕಾರು ಹೊತ್ತುರಿದ ಪರಿಣಾಮ ಇಬ್ಬರು ಸಜೀವ ದಹನವಾಗಿದ್ದಾರೆ.
ಕಾರಿನಲ್ಲಿ 5 ಮಂದಿ ಪ್ರಯಾಣ ಮಾಡುತ್ತಿದ್ದರು ಎನ್ನಲಾಗಿದೆ. ಐವರಲ್ಲಿ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.ಕಾರು ಚಾಲಕ ಧನಂಜಯ್ (34) ಹಾಗೂ ತಾಯಿ ಕಲಾವತಿ (54) ಮೃತರು. ಮೂರು ವರ್ಷದ ಮಾನ್ವಿತ ಹಾಗೂ ಶೋಭಾ ಸೇರಿದಂತೆ ಉಮಾದೇವಿ ಎಂಬವರು ಗಾಯಗೊಂಡಿದ್ದು, ಅವರನ್ನು ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಲ್ಲದೇ ಬಸ್ ಸಹ ರಸ್ತೆ ಬದಿ ಹಳ್ಳದಲ್ಲಿ ಪಲ್ಟಿಯಾಗಿ ವಾಲಿದ್ದು, ಬಸ್ ನಲ್ಲಿದ್ದ ಪ್ರಯಾಣಿಕರಿಗೂ ಗಾಯಗಳಾಗಿವೆ. ಸ್ಥಳಕ್ಕೆ ಆಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ ಕಾರಿನ ಬೆಂಕಿ ನಂದಿಸಿದ್ದಾರೆ. ಘಟನಾ ಸ್ಥಳಕ್ಕೆ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.