ಬೆಂಗಳೂರು:- ದೊಡ್ಡಕಲ್ಲಸಂದ್ರ ಮೆಟ್ರೋ ನಿಲ್ದಾಣದಲ್ಲಿ ಬಟ್ಟೆ ಸರಿಯಿಲ್ಲ ಅಂತ ಮೊಟ್ರೋ ಸಿಬ್ಬಂದಿ ಕಾರ್ಮಿಕನನ್ನು ತಡೆದು ನಿಲ್ಲಿಸಿ ಅಪಮಾನಿಸಿದ ಘಟನೆ ಜರುಗಿದೆ.
ಶರ್ಟ್ನ ಗುಂಡಿಯನ್ನ ಹಾಕಿಕೊಂಡು ನೀಟಾಗಿ ಬಾ, ಇಲ್ಲದಿದ್ದರೆ ಒಳಗೆ ಪ್ರವೇಶವಿಲ್ಲ ಎಂದು ಮೆಟ್ರೋ ಸಿಬ್ಬಂದಿ ಕಾರ್ಮಿಕನಿಗೆ ಹೇಳಿದ್ದಾರೆ. ಇದನ್ನು ಕಂಡ ಜನರು ಮೆಟ್ರೋ ಸಿಬ್ಬಂದಿ ವರ್ತನೆಗೆ ಭಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
99 ಅಡಿಯ ಶ್ರೀ ಭದ್ರಕಾಳಮ್ಮ ದೇವಿಯ ಸೌಮ್ಯರೂಪ ವಿಗ್ರಹಕ್ಕೆ ಭೂಮಿ ಪೂಜೆ !
ಇತ್ತೀಚಿಗೆ ರಾಜಾಜಿನಗರ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಸಿಬ್ಬಂದಿ ರೈತನನ್ನ ಅವಮಾನಿಸಿದ್ದರು. ಬಟ್ಟೆ ಸ್ವಚ್ಛವಾಗಿಲ್ಲ ಎಂಬ ಕಾರಣಕ್ಕೆ ರೈತನನ್ನು ಮೆಟ್ರೋ ಒಳಗೆ ಬಿಡದೆ ಸಿಬ್ಬಂದಿ ಅವಮಾನ ಮಾಡಿದ್ದರು. ಇದು ಸಹ ಪ್ರಯಾಣಿಕನ ಮೊಬೈಲ್ನಲ್ಲಿ ಸೆರೆಯಾಗಿತ್ತು. ರೈತನನ್ನು ಒಳಗೆ ಬಿಡದ ಸಿಬ್ಬಂದಿ ವಿರುದ್ಧ ಸಹ ಪ್ರಯಾಣಿಕರು ಕಿಡಿಕಾರಿದ್ದರು.
ಇದೀಗ ಮತ್ತದೇ ಘಟನೆ ಜರುಗಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣ ವಾಗಿದೆ.