ಬೆಂಗಳೂರು: ವೀಕೆಂಡ್ ಕರ್ಫೂ ವೇಳೆ ಅನಗತ್ಯವಾಗಿ ಹೋರಾಡಿದರೆ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಕಮಿಷನರ್ ಕಮಲ್ ಪಂಥ್ ಹೇಳಿಕೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾತ್ರಿ 8 ಗಂಟೆಯಿಂದ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅನಗತ್ಯವಾಗಿ ಓಡಾಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಯಾವುದೇ ರೀತಿಯ ಪಾಸ್ಗಳನ್ನು ವಿತರಣೆ ಮಾಡುವುದಿಲ್ಲ.
ಕಂಪನಿ, ಕಚೇರಿಗಳಿಗೆ ಹೋಗುವವರು ಐಡಿ ಕಾರ್ಡ್ ಇಟ್ಟುಕೊಂಡು ಹೋಗಬೇಕು. ಇನ್ನೂ ಪ್ರಯಾಣಿಕರು ಟಿಕೆಟ್ ತೋರಿಸಿ ಓಡಾಡಬಹುದಾಗಿದೆ ಎಂದು ಹೇಳಿದ್ದರು. ಅಲ್ಲದೇ ವೀಕೆಂಡ್ ಕರ್ಫ್ಯೂನಲ್ಲಿ ಅನಗತ್ಯವಾಗಿ ಹೊರಬಂದರೆ ಅರೆಸ್ಟ್ ಮಾಡಿ ಕೇಸ್ ದಾಖಲಿಸ್ತೇವೆ. ಪೊಲೀಸರಿಗೆ ಸಾರ್ವಜನಿಕರು ಸಹಕಾರ ನೀಡಬೇಕು, ಅಲ್ಲದೇ ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಳ್ಳಬೇಕು ಎಂದು ಪೊಲೀಸ್ ಆಯುಕ್ತ ಕಮಲ್ ಪಂತ್ ಎಚ್ಚರಿಕೆ ನೀಡಿದ್ದಾರೆ.
