ಬೆಂಗಳೂರು:- ದಲಿತರು, ಹಿಂದುಳಿದವರ ಮೀಸಲಾತಿ ಕಿತ್ತು ಮುಸ್ಲಿಂ ಸಮುದಾಯಕ್ಕೆ ನೀಡುತ್ತಾರೆ ಎಂಬ ಪ್ರಧಾನಿ ಮೋದಿ ಹೇಳಿಕೆ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಲಾಗಿದೆ.
ಪಿವಿಆರ್ನಲ್ಲಿ ಇನ್ಮುಂದೆ ಜಾಹೀರಾತು ಇರಲ್ಲ? ಹೊಸ ತಂತ್ರಕ್ಕೆ ಮುಂದಾದ ಸಂಸ್ಥೆ
ಇಂದು ಮಾಜಿ ಸಂಸದ ವಿಎಸ್ ಉಗ್ರಪ್ಪ ಅವರ ನೇತೃತ್ವದ ಕಾಂಗ್ರೆಸ್ ನಿಯೋಗ ಮೋದಿ ವಿರುದ್ದ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ದೂರು ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಉಗ್ರಪ್ಪ, ನರೇಂದ್ರ ಮೋದಿ ಮಾನಸಿಕ ಸ್ಮಿತೆ ಕಳೆದುಕೊಂಡಿದ್ದಾರೆ. ರಾಜಸ್ಥಾನದ ಚುನಾವಣಾ ರ್ಯಾಲಿ ಭಾಗಿ ಆಗಿದ್ದಾಗ ಈ ರೀತಿ ಮಾತನಾಡಿದ್ದಾರೆ. ದೇಶದ ಆಸ್ತಿ ಸರ್ವೆ ಮಾಡುತ್ತಾರೆ ಎಂದು ಮಾತನಾಡಿದ್ದಾರೆ. ಸಾವನ್ನಪ್ಪಿದ ಮೇಲೆ ಅವರ ಆಸ್ತಿಗಳನ್ನು ಹಂಚಿಕೆ ಮಾಡುತ್ತಾರೆ ಎಂದು ಹೇಳಿದ್ದಾರೆ. ದಲಿತರ ಮೀಸಲಾತಿಯನ್ನು ಕಡಿತ ಮಾಡಿ ಮುಸ್ಲಿಮರಿಗೆ ಕೊಡುತ್ತಾರೆ ಎಂದು ಆರೋಪಿಸಿದ್ದಾರೆ. ಸಂವಿಧಾನ ಆಧಾರದ ಮೇಲೆ ನಾವು ಮೀಸಲಾತಿ ಕೊಡುವುದು ಮಾಡಿದ್ದೇವೆ. ಸಂವಿಧಾನದ ವಿರುದ್ಧ ನಾವು ಯಾವುದು ಮಾಡಿಲ್ಲ. ಯಾರ ಆಸ್ತಿಯನ್ನು ಸರ್ವೆ ಮಾಡಲು ನಾವು ಪ್ರಣಾಳಿಕೆಯಲ್ಲೂ ಕೊಟ್ಟಿಲ್ಲ. ಈ ಹಿನ್ನಲೆ ಪ್ರಧಾನಿ ಮೋದಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಿಕೊಳ್ಳಬೇಕು. ಅಲ್ಲದೇ ಮೋದಿ ಅವರನ್ನು ಚುನಾವಣಾ ಪ್ರಚಾರದಿಂದ ಕೈ ಬಿಡಬೇಕು ಎಂದು ಆಗ್ರಹಿಸಿದರು