ಬೆಂಗಳೂರು: ಮುಡಾ ಹಗರಣ ಕುರಿತಂತೆ ಸಿಎಂ ಸಿದ್ಧರಾಮಯ್ಯ ವಿರುದ್ಧ ಬಿಜೆಪಿ ಮುಖಂಡ ಎನ್.ಆರ್. ರಮೇಶ್ ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದಾರೆ.ಸಿದ್ದರಾಮಯ್ಯ ಅವರು ಹಣಕಾಸು ಸಚಿವ, ಉಪಮುಖ್ಯಮಂತ್ರಿ ಹಾಗೂ ಮುಖ್ಯಮಂತ್ರಿಯಾಗಿದ್ದ ವೇಳೆ ಭೂಹಗರಣ, ಮುಡಾ ಹಗರಣದಲ್ಲಿ ಭಾಗಿಯಾಗಿದ್ದಾರೆಂದು 400ಕ್ಕೂ ಹೆಚ್ಚು ಪುಟಗಳ ದಾಖಲೆಗಳ ಸಮೇತ ದೂರು ನೀಡಿದ್ದಾರೆ
GT Mall: ರೈತನಿಗೆ ಅವಮಾನ: ಬಿಬಿಎಂಪಿ ನೋಟಿಸ್ಗೆ ಜಿಟಿ ಮಾಲ್ ಮಾಲೀಕ ಹೇಳಿದ್ದೇನು?
ಹಾಗೆ ಸಿದ್ಧರಾಮಯ್ಯನವರ ಪತ್ನಿ ಶ್ರೀಮತಿ. ಬಿ. ಎಂ. ಪಾರ್ವತಿ, ಬಾವಮೈದುನ ಬಿ. ಎಂ., ಮಲ್ಲಿಕಾರ್ಜುನ ಸ್ವಾಮಿ, ಮೂಡ ಮಾಜಿ ಅಧ್ಯಕ್ಷರುಗಳಾದ ಬಸವೇಗೌಡ, ಹೆಚ್. ವಿ. ರಾಜೀವ್ ಮತ್ತು ಆಯುಕ್ತರಾಗಿದ್ದ ಡಿ. ಬಿ. ನಟೇಶ್ ರವರುಗಳ ವಿರುದ್ಧ ಅಧಿಕಾರ ದುರುಪಯೋಗ, ವಂಚನೆ ಮತ್ತು ಭ್ರಷ್ಟಾಚಾರ ಪ್ರಕರಣಗಳು ಎಂದು ಸಹ ದೂರು ದಾಖಲು ಮಾಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ತಮ್ಮ ರಾಜಕೀಯ ಪ್ರಭಾವದಿಂದ ತಮ್ಮ ಪತ್ನಿಯ ಹೆಸರಿಗೆಹಂಚಿಕೆ ಆಗಿದೆ. ಇದರಿಂದ 40 ಕೋಟಿ ರೂ ಗಳಿಗೂ ಹೆಚ್ಚು ಮೊತ್ತ ಸರ್ಕಾರಕ್ಕೆ ನಷ್ಟ ಆಗಿದೆ. ಅಧಿಕಾರ ದುರುಪಯೋಗ ಪಡೆಸಿಕೊಂಡು ಮಾಡಿರುವ ಅತೀ ದೊಡ್ಡ ಭೂ ಹಗರಣ ಹಾಗಾಗಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಪತ್ನಿ ಪಾರ್ವತಿ, ಮಲ್ಲಿಕಾರ್ಜುನ ಸೇರಿ ಇತರರ ವಿರುದ್ಧ ದೂರು ದಾಖಲು ಮಾಡಿದ್ದೇನೆ ಎಂದು ಹೇಳಿದರು.