ಮೈಸೂರು: ಮೋದಿ ಯಾವ ಮುಖ ಹೊತ್ತುಕೊಂಡು ಮತ ಕೇಳುತ್ತಿದ್ದಾರೆ. ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೆ.ಆರ್. ನಗರ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು, ಮೋದಿ ಯಾವ ಮುಖ ಹೊತ್ತುಕೊಂಡು ಮತ ಕೇಳುತ್ತಿದ್ದಾರೆ. ಬಿಜೆಪಿಗೆ ಮತ ಕೇಳುವ ನೈತಿಕತೆ ಇಲ್ಲ. ಕೊಟ್ಟ ಯಾವ ಭರವಸೆಗಳನ್ನು ಮೋದಿ ಈಡೇರಿಸಿಲ್ಲ. ಉದ್ಯೋಗ ಕೇಳಿದರೆ ಪಕೋಡ ಮಾರಿ ಎಂದ ಮೋದಿ ಈ ದೇಶದ ಪ್ರಧಾನ ಮಂತ್ರಿ ಆಗೋಕೆ ಲಾಯಕ್ ಇದ್ದಾರಾ ಎಂದು ಸಿಎಂ ಪ್ರಶ್ನಿಸಿದರು.
ಇನ್ನೂ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರ ಸಂಪೂರ್ಣ ಸಾಲಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಾಲಮನ್ನಾ ಅಸ್ತ್ರ ಪ್ರಯೋಗ ಮಾಡಿದರು. ನಾನು ಮಾಡಿದ ಕೆಲಸದ ಬಗ್ಗೆ ವರದಿ ಕೊಡೋಕೆ ಸಿದ್ಧ ಇದ್ದೇನೆ. ಬಿಜೆಪಿ ಅವರು ಮಾಡಿದ ಕೆಲಸದ ಬಗ್ಗೆ ವರದಿ ಕೊಡುತ್ತಾರಾ?. ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿದ್ರಿ? ರೈತರ ಸಾಲ ಮನ್ನಾ ಮಾಡಿದ್ರಾ?. ಜೆಡಿಎಸ್ ಬಿಜೆಪಿ ‘ಬಿ’ ಟೀಂ ಅಂತಾ ನಾನು ಹೇಳಿದ್ದಾಗ ದೇವೇಗೌಡರು ಕೆಂಡಾಮಂಡಲಾಗಿದ್ದರು. ಈಗ ಏನ್ ಹೇಳುತ್ತೀರಿ ದೇವೇಗೌಡರೇ ಎಂದು ಪ್ರಶ್ನಿಸಿದರು.
ಎಲೆಕೋಸನ್ನ ವಾರಕ್ಕೊಮ್ಮೆ ತಿನ್ನೋದ್ರಿಂದ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ!?
ಮೋದಿ ಅವರನ್ನು ದೇವೇಗೌಡರು ಹೊಗಳಿದ್ದೇ ಹೊಗಳಿದ್ದು. ನಾನು ಸತ್ಯ ಹೇಳಿದ್ರೆ ಸಿದ್ದರಾಮಯ್ಯಗೆ ಗರ್ವ ಬಂದಿದೆ. ಗರ್ವಭಂಗ ಮಾಡಿ ಅಂತಾ ದೇವೇಗೌಡರು ಹೇಳುತ್ತಾರೆ. ಕೋಲಾರ ಮೀಸಲು ಕ್ಷೇತ್ರ ಆಗದೇ ಇದ್ದರೆ ಅಲ್ಲೂ ದೇವೇಗೌಡರ ಮನೆಯವರೇ ನಿಲ್ಲುತ್ತಿದ್ದರು. ಕುಟುಂಬದ ರಕ್ಷಣೆಗಾಗಿ ದೇವೇಗೌಡರು ಬಿಜೆಪಿ ಜೊತೆ ಸೇರಿದ್ದಾರೆ. ಚುನಾವಣೆ ಮುಗಿದ ಕೂಡಲೇ ನಮ್ಮ ಸರ್ಕಾರ ಪತನ ಆಗುತ್ತೆ ಅಂತಾರೆ. ಸರ್ಕಾರ ಪತನ ಹೇಗೆ ಮಾಡುತ್ತೀರಿ? ಚುನಾವಣೆ ಆದ ಮರುದಿನವೇ ಸರ್ಕಾರ ಹೇಗೆ ಬೀಳುತ್ತೆ ಹೇಳಿ? ಎಂದರು.