ಬೆಳಗಾವಿ : ಬೆಳಗಾವಿಯಲ್ಲಿ ಮರಾಠಿ ಯುವಕರು ಗೂಂಡಾಗಿರಿ ನಡೆಸಿದ್ದು, ಕನ್ನಡ ಮಾತಾಡು ಅಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ ನಡೆಸಿದ್ದಾರೆ. ಬೆಳಗಾವಿ ತಾಲೂಕಿನ ಸುಳೇಬಾವಿ ಬಾಳೇಕುಂದ್ರಿ ಗ್ರಾಮ ಮಧ್ಯೆ ಗಲಾಟೆ ನಡೆದಿದೆ. ಬಸ್ ಕಂಡಕ್ಟರ್ ಮಹದೇವ್ ಮೇಲೆ ಮರಾಠಿ ಯುವಕರ ಗುಂಪಿನಿಂದ ಹಲ್ಲೆ ನಡೆದಿದೆ.
ಬಸ್ ನಲ್ಲಿದ್ದ ಯುವತಿ ಕಂಡಕ್ಟರ್ ಮಹದೇವಗೆ ಟಿಕೆಟ್ ಕೊಡುವಂತೆ ಮರಾಠಿಯಲ್ಲಿ ಹೇಳಿದ್ದಾಳೆ. ಯುವತಿಯೊಂದಿಗ್ಗೆ ಯುವಕನೊಬ್ಬ ಪ್ರಯಾಣ ಮಾಡುತ್ತಿದ್ದರಿಂದ ಎರಡು ಟಿಕೆಟ್ ಕೇಳಿದ್ದಾಳೆ. ಮರಾಠಿ ಬರುವುದಿಲ್ಲ ನನಗೆ ಕನ್ನಡದಲ್ಲಿ ಹೇಳುವಂತೆ ಕಂಡಕ್ಟರ್ ಹೇಳಿದ್ದಾನೆ. ಇಷ್ಟಕ್ಕೆ ಜನರನ್ನ ಕರೆಸಿ ಚಲಿಸುತ್ತಿರುವ ಬಸ್ ನಿಲ್ಲಿಸಿ ಹಲ್ಲೆ ನಡೆಸಿದ್ದಾರೆ. ಹಲ್ಲೆಗೆ ಒಳಗಾದ ಕಂಡಕ್ಟರ್ ಪೊಲೀಸ್ ಠಾಣೆಗೆ ಹೋಗಿ ದೂರು ಸಲ್ಲಿಸಿದ್ದಾರೆ. ಹಲ್ಲೆಗೊಳಗಾದ ಕಂಡಕ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.