ರಾಯ್ಪುರ:- ಅಧಿಕಾರಕ್ಕೆ ಬಂದರೆ ಛತ್ತೀಸ್ಗಢದಲ್ಲೂ ಗೃಹ ಲಕ್ಷ್ಮಿ ಯೋಜನೆ ಜಾರಿ ತರಲಾಗುತ್ತದೆ ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಮುಂಬರುವ ಛತ್ತೀಸ್ಗಢ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬಂದರೆ ಕರ್ನಾಟಕದಂತೆಯೇ ಛತ್ತೀಸ್ಗಢದಲ್ಲಿಯೂ ಗೃಹ ಲಕ್ಷ್ಮಿ ಯೋಜನೆ ಜಾರಿಗೆ ತರಲಾಗುತ್ತದೆ ಎಂದರು.
![Demo](https://ainlivenews.com/wp-content/uploads/2023/12/spoorthi-1.jpg)
ಛತ್ತೀಸ್ಗಢದಲ್ಲಿ 70 ವಿಧಾನಸಭಾ ಸ್ಥಾನಗಳಿಗೆ ಎರಡನೇ ಹಂತದ ಮತದಾನಕ್ಕೆ ಕೇವಲ ನಾಲ್ಕು ದಿನ ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪಕ್ಷಗಳ ಮುಖಂಡರು ಪ್ರಚಾರ ಕಾರ್ಯ ಚುರುಕುಗೊಳಿಸಿದ್ದಾರೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಕೂಡ ಚುನಾವಣಾ ಕದನಕ್ಕೆ ದುಮುಕಿದ್ದಾರೆ. ರಾಜ್ಯದಲ್ಲಿ ತನ್ನ ‘ಗೃಹ ಲಕ್ಷ್ಮಿ ಯೋಜನೆ’ಯನ್ನು ಜಾರಿಗೆ ತರುವುದಾಗಿ ಘೋಷಿಸಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ’ ಅನ್ನು ಛತ್ತೀಸ್ಗಢದಲ್ಲಿಯೂ ಜಾರಿಗೆ ತರಲಾಗುವುದು. ಈ ಯೋಜನೆ ಅಡಿ ವರ್ಷಕ್ಕೆ 15,000 ರೂ.ಗಳನ್ನು ಮಹಿಳೆಯರ ಖಾತೆಗಳಿಗೆ ಜಮೆ ಮಾಡಲಾಗುವುದು. ಇದರೊಂದಿಗೆ ಪ್ರತಿ ಎಲ್ಪಿಜಿ ಸಿಲಿಂಡರ್ 500 ರೂ. ಸಬ್ಸಿಡಿ ಇರುತ್ತದೆ ಎಂದು ಭರವಸೆ ನೀಡಿದ್ದಾರೆ.
![](https://ainlivenews.com/wp-content/uploads/2024/01/Ad-Banner-copy-scaled.jpg)