ಹೊಸಪೇಟೆ: ರೈತರ ಸಾಲ ಮನ್ನಾದಿಂದ ಹಿಡಿದು ಜನ ಸಾಮಾನ್ಯರ ಬದುಕಿನ ಭಾರವನ್ನು ಕಡಿಮೆ ಮಾಡಿದ್ದು ಕಾಂಗ್ರೆಸ್. ರಾಜ್ಯದ ಕಾಂಗ್ರೆಸ್ ಸರ್ಕಾರ ನೀಡಿದ ಪಂಚ ಗ್ಯಾರಂಟಗಳಿಂದ ಕೋಟ್ಯಂತರ ಜನರಿಗೆ ಅನುಕೂಲವಾಗಿದೆ ಎಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಇ ತುಕಾರಾಂ ಅವರು ಹೇಳಿದರು. ಹೊಸಪೇಟೆ ಪಟ್ಟಣದಲ್ಲಿ ಬಹಿರಂಗ ಪ್ರಚಾರ ಸಭೆ ಹಾಗೂ ರೋಡ್ ಶೋ ನಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಯೋಜನೆಗಳಿಂದ ಜನರು ಬದುಕುತ್ತಿದ್ದಾರೆ. ದೇಶದ ಭವಿಷ್ಯ ನಮ್ಮೆಲ್ಲರ ಭವಿಷ್ಯ. ಆದ್ದರಿಂದ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಬೇಕಿದೆ. ಇಲ್ಲಿನ ತುಂಗಾ ಭದ್ರಾ ಜಲಾಶಯದಿಂದ ಕೋಟ್ಯಂತರ ರೈತರು ಮತ್ತು ಅವರ ಅವಲಂಬಿತರಿಗೆ ಅನುಕೂಲವಾಗಿದೆ. ವಿಜಯನಗರ ಉಕ್ಕು ಕಾರ್ಖಾನೆಯಿಂದ ಅಸಂಖ್ಯಾತ ಉದ್ಯೋಗ ಸಿಕ್ಕಿದೆ. ದೊಡ್ಡ ದೊಡ್ಡ ಉದ್ಯಮಗಳು, ವಿದ್ಯುತ್ ಉತ್ಪಾದನಾ ಕೇಂದ್ರಗಳನ್ನು ನೀಡಿದ್ದು ಕಾಂಗ್ರೆಸ್. ಆದ್ದರಿಂದ ಕಾಂಗ್ರೆಸ್ ಬೆಂಬಲಿಸಿ ಎಂದರು.
Raw banana: ಸಿಹಿಯಾದ ಬಾಳೆಹಣ್ಣು ಮಾತ್ರವಲ್ಲ ಬಾಳೆಕಾಯಿ ಕೂಡ ಆರೋಗ್ಯಕ್ಕೆ ಉತ್ತಮ!
ಪ್ರಧಾನಿ ಮೋದಿ ಅವರಿಗೆ ಮಾಧ್ಯಮಗಳ ಮುಂದೆ ಮಾತನಾಡುವ ಧೈರ್ಯ ಇಲ್ಲ, ಅವರಿಗೆ ಉತ್ತರದಾಯಿತ್ವವೇ ಇಲ್ಲ. ಸಂವಿಧಾನಕ್ಕೆ ಬದ್ಧವಾಗಿರುವ ಕಾಂಗ್ರೆಸ್ ಬೆಂಬಲಿಸಿ ಎಂದರು. ಈ ಸಂದರ್ಭದಲ್ಲಿ ಸಚಿವರಾದ ಬಿ.ಝೆಡ್. ಜಮೀರ್ ಅಹ್ಮದ್ ಖಾನ್, ಮಾಜಿ ಸಭಾಪತಿ ವೆಂಕಟೇಶ್ ಗೌಡ, ಶಾಸಕರಾದ ಗವಿಯಪ್ಪ, ವಿಜಯನಗರ ಜಿಲ್ಲಾ ಕಾಂಗ್ರೆಸ್ ಪಕ್ಷದ ಸಮಿತಿ ಅಧ್ಯಕ್ಷ ಸಿರಾಜ್ ಶೇಖ್ ಹೊಸಪೇಟೆ ಬ್ಲಾಕ್ ಅಧ್ಯಕ್ಷರು, ಹೊಸಪೇಟೆ ನಗರದ ಸದಸ್ಯರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕ ಉಪಸ್ಥಿತರಿದ್ದರು.