ಬಳ್ಳಾರಿ : ಬಳ್ಳಾರಿಯಲ್ಲಿ ಚುನಾವಣಾ ಕಾವು ಜೋರಾಗಿದ್ದು, ಕಾಂಗ್ರೆಸ್ ಅಭ್ಯರ್ಥಿಯಿಂದ ಭರ್ಜರಿ ಪ್ರಚಾರ ನಡೆಯುತ್ತಿದೆ. ಬಳ್ಳಾರಿ ನಗರ ವ್ಯಾಪ್ತಿಯ ನಗರದ ತಾಳೂರು ರಸ್ತೆ, ಅಂಬೇಡ್ಕರ್ ಸರ್ಕಲ್, ನಾಗಪ್ಪ ಕಟ್ಟೆ, ಮಹಾನಂದಿ ಕೊಟ್ಟಂನಲ್ಲಿ ಸೇರಿದಂತೆ ನಗರದೆಲ್ಲೆಡೆ ಕಾಂಗ್ರೆಸ್ ಅಭ್ಯರ್ಥಿ ಈ ತುಕಾರಾಂ ಮತಭೇಟೆ ನಡೆಸಿದ್ದಾರೆ.
ಗ್ಯಾರೆಂಟಿ ಕಾರ್ಡ್ ಗಳನ್ನು ಮನೆಮನೆಗೆ ಹಂಚುತ್ತಾ ಮತಯಾಚಿಸಿದ್ದಾರೆ. ಮಹಿಳೆಯರಿಗೆ ಒಂದು ಲಕ್ಷ ರೂಪಾಯಿ ನೀಡುವ ಮಹಾಲಕ್ಷ್ಮಿ ಗ್ಯಾರೆಂಟಿ ಕಾರ್ಡ್ ವಿತರಣೆ ಮಾಡಿದ್ದು, ತುಕಾರಾಂ ಜೊತೆ ಸಚಿವರಾದ ಬಿ.ನಾಗೇಂದ್ರ, ಶಾಸಕ ಎನ್. ಭರತ್ ರೆಡ್ಡಿ ಸಾಥ್ ನೀಡಿದ್ದಾರೆ.